ಸುಕ್ಷೇತ್ರ ಗೋಕರ್ಣದ ಅರಬ್ಬಿ ಸಮುದ್ರದಲ್ಲಿ ಲಿಂ. ಸ್ವಾಮಿ ಸಿದ್ಧೇಶ್ವರ ಚಿತಾಭಸ್ಮ ವಿಸರ್ಜನೆ

ಕಾರವಾರ: ವಿಜಯಪುರ ಜ್ಞಾನಯೋಗಾಶ್ರಮದ ಲಿಂ. ಸ್ವಾಮಿ ಸಿದ್ಧೇಶ್ವರ ಅವರ ಚಿತಾಭಸ್ಮವನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಬಳಿ ಇರುವ ಅರಬ್ಬಿ ಸಮುದ್ರದಲ್ಲಿ ವಿಸರ್ಜನೆ ಮಾಡಲಾಯಿತು. ಬೆಳಿಗ್ಗೆ ವಿಜಯಪುರದಿಂದ ಶ್ರೀ ಬಸವಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಾನಾ ಸ್ವಾಮೀಜಿಗಳು ಶ್ರೀಗಳ ಚಿತಾಭಸ್ಮದೊಂದಿಗೆ ಹೊರಟಿದ್ದರು.  ಮೊದಲಿಗೆ ಕೂಡಲ ಸಂಗಮದಲ್ಲಿ ಚಿತಾಭಸ್ಮ ವಿಸರ್ಜಿಸಿದ ಸ್ವಾಮೀಜಿಗಳು ಸಂಜೆ ಸುಕ್ಷೇತ್ರ ಗೋಕರ್ಣಕ್ಕೆ ಆಗಮಿಸಿದರು.  ನಂತರ ಇಲ್ಲಿನ ಅರಬ್ಬಿ ಸಮುದ್ರದಲ್ಲಿ ನಡೆದಾಡಿದ ದೇವರು ಶತಮಾನದ ಸಂತ ಎಂದೇ ಹೆಸರಾಗಿರುವ ಬಸವನಾಡಿನ ಲಿಂ. ಸ್ವಾಮಿ ಸಿದ್ಧೇಶ್ವರ […]

ಕೂಡಲ ಸಂಗಮದಲ್ಲಿ ಲಿಂ. ಸ್ವಾಮಿ ಸಿದ್ಧೇಶ್ವರ ಅಸ್ತಿ ವಿಸರ್ಜನೆ- ಶ್ರೀಗಳ ಇಚ್ಛೆಯಂತೆ ತ್ರಿವೇಣಿ ಸಂಗಮದಲ್ಲಿ ವಿಸರ್ಜನೆ- ಬಸವಲಿಂಗ ಸ್ವಾಮೀಜಿ

ಬಾಗಲಕೋಟೆ: ಲಿಂ. ಸ್ವಾಮಿ ಸಿದ್ಧೇಶ್ವರರ ಆಶಯದಂತೆ ಅವರ ಅಸ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐತಿಹಾಸಿಕ ಕೂಡಲ ಸಂಗಮದಲ್ಲಿ ವಿಸರ್ಜನೆ ಮಾಡಲಾಯಿತು. ಬೆ. 7 ಗಂಟೆಯಿಂದ 8.17ರ ವರೆಗೆ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಐದು ಮಡಿಕೆಗಳಲ್ಲಿ ಸಿದ್ದೇಶ್ವರ ಶ್ರೀಗಳ ಇಚ್ಚೆಯಂತೆ ಅಸ್ಥಿ ಸಹಿತ ಚಿತಾಭಸ್ಮ ಸಂಗ್ರಹ ಮಾಡಿ ತರಲಾಗಿತ್ತು.  ಸುಮಾರು 900 ರಿಂದ 10000 ಜನರ ಸಮ್ಮುಖದಲ್ಲಿ ಎಲ್ಲ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮಲಪ್ರಭಾ, ಕೃಷ್ಣಾ ಮತ್ತು ಘಟಪ್ರಭಾ ತ್ರಿವೇಣಿ ನದಿಗಳು ಸೇರುವ ಸ್ಥಳದಲ್ಲಿ ಸುಮಾರು […]

ಬಸವನಾಡಿನ ನಡೆದಾಡಿದ ದೇವರು ಲಿಂ. ಸ್ವಾಮಿ ಸಿದ್ಧೇಶ್ವರ ಚಿತಾಭಸ್ಮ ಕೂಡಲ ಸಂಗಮ, ಗೋಕರ್ಣಕ್ಕೆ ರವಾನೆ

ವಿಜಯಪುರ: ನಡೆದಾಡಿವ ದೇವರು ಲಿಂ. ಸ್ವಾಮಿ ಸಿದ್ದೇಶ್ವರ ಅವರ ಅಂತ್ಯಕ್ರಿಯೆ ನಡೆದು ಏಳನೇ ದಿನದ ಹಿನ್ನೆಲೆಯಲ್ಲಿ ಶ್ರೀಗಳ ಆಶಯದಂತೆ ಅವರ ಚುತಾಭಸ್ಮವನ್ನು ನದಿ ಮತ್ತು ಸಾಗರದಲ್ಲಿ ವಿಸರ್ಜನೆ ಮಾಡುವ ಕಾರ್ಯ ಆರಂಭವಾಗಿದೆ. ವಿಜಯಪುರ ನಗರ ಜ್ಞಾನಯೋಗಾಶ್ರಮದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದ ಸ್ಥಳದಿಂದ ಸಂಗ್ರಹಿಸಲಾದ ಚಿತಾಭಸ್ಮವನ್ನು ಬೆಳಗ್ಗೆ 5 ಗಂಟೆಗೆ ಜ್ಞಾನ ಯೋಗಾಶ್ರಮದಿಂದ ವಿಶೇಷ ವಾಹನದಲ್ಲಿ ತೆಗೆದುಕೊಂಡು ಹೋಗಲಾಯಿತು.‌ 12ನೇ ಶತಮಾನದ ಸಾಮಾಜಿಕ ಹೋರಾಟಗಾರ ಅಣ್ಣ ಬಸವಣ್ಣನವರ ಐಕ್ಯ ಸ್ಥಳ ಕೂಡಲ ಸಂಗಮ ಹಾಗೂ ಸಂಜೆ […]

ಲಿಂ. ಸಿದ್ಧೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ಸ್ಥಳದ ದರ್ಶನ ಪಡೆದ ಸಿದ್ದಗಂಗಾ ಮಠಾಧೀಶರು, ಮಹಾದೇವ ಸಾಹುಕಾರ ಭೈರಗೊಂಡ, ವಿದ್ಯಾರ್ಥಿಗಳು

ವಿಜಯಪುರ: ಬಸವನಾಡಿನ ನಡೆದಾಡಿದ ದೇವರು ವಿಜಯಪುರ ಜ್ಞಾನಯೋಗಾಶ್ರಮದ ಲಿಂ. ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ತುಮಕೂರು ಸಿದ್ದಗಂಗಾ ಸ್ವಾಮೀಜಿ ಭೇಟಿ ನೀಡಿದರು. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆ ಮಾಡಿದ ಸ್ಥಳ ದರ್ಶನ ಮಾಡಿದ ಶ್ರೀ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ನಂತರ ನಮನ ಸಲ್ಲಿಸಿ ಎರಡು ಸುತ್ತು ಹಾಕಿದರು.  ನಂತರ ಸ್ವಾಮಿ ಸಿದ್ಧೇಶ್ವರ ಅವರು ವಾಸಿಸುತ್ತಿದ್ದ ಕೋಣೆಗೆ ತೆರಳಿ ಅಲ್ಲಿ ಸಂಗ್ರಸಿಹಿ ಇಡಲಾಗಿರುವ ಶ್ರೀಗಳ ಚಿತಾಭಸ್ಮದ ದರ್ಶನ ಪಡೆದರು. ಈ ಸಂದರ್ಭದಲ್ಲಿ […]

ಲಿಂ. ಸ್ವಾಮಿ ಸಿದ್ಧೇಶ್ವರ ಚಿತಾಭಸ್ಮ ಸಂಗ್ರಹ- ರವಿವಾರ ಸುಕ್ಷೇತ್ರ ಕೂಡಲ ಸಂಗಮ, ಗೋಕರ್ಣದಲ್ಲಿ ಅಸ್ತಿ ವಿಸರ್ಜನೆ- ಬಸವಲಿಂಗ ಸ್ವಾಮೀಜಿ

ವಿಜಯಪುರ: ಸೋಮವಾರ ಜನೇವರಿ 2 ರಂದು ವೈಕುಂಠ ಏಕಾದಶಿ ದಿನ ಲಿಂಗೈಕ್ಯರಾದ ಬಸವನಾಡಿನ ನಡೆದಾಡಿದ ದೇವರ ಚಿತಾಭಸ್ಮವನ್ನು ಜ್ಞಾನಯೋಗಾಶ್ರಮದ ಸ್ವಾಮೀಜಿಗಳು ಸಂಗ್ರಿಸಿದ್ದಾರೆ.  ಜ. 3 ರಂದು ರಾತ್ರಿ ಶ್ರೀಗಳ ಅಂತ್ಯಕ್ರಿಯೆ ನಡೆಸಲಾಗಿತ್ತು.  ಅಂತ್ಯಕ್ರಿಯೆ ನಡೆಸಿ ಮೂರು ದಿನಗಳಾದ ಹಿನ್ನೆಲೆಯಲ್ಲಿ ಜ್ಞಾನಯೋಗಾಶ್ರಮದಲ್ಲಿ ಬಸವಲಿಂಗ ಸ್ವಾಮೀಜಿ ನೇತೃತ್ವದಲ್ಲಿ ನಾನಾ ಸ್ವಾಮೀಜಿ ಲಿಂ. ಸ್ವಾಮಿ ಸಿದ್ಧೇಶ್ವರ ಅವರ ಚಿತಾಭಸ್ಮ ಸಂಗ್ರಹಿಸಿದರು. ಮಣ್ಣಿನ ಮಡಿಕೆಗಳು ಸೇರಿದಂತೆ ಒಟ್ಟು ಏಳು ನಾನಾ ಪಾತ್ರೆಗಳಲ್ಲಿ ಚಿತಾಭಸ್ಮವನ್ನು ಸಂಗ್ರಹಿಸಿದ ಸ್ವಾಮೀಜಿಗಳು ಆ ಪಾತ್ರೆಗಳ ಮೇಲ್ಭಾಗದಲ್ಲಿ ಕೇಸರಿ ಬಣ್ಣದ ಬಟ್ಟೆಯನ್ನು […]

25 ಲಕ್ಷಕ್ಕೂ ಹೆಚ್ಚು ಭಕ್ತರಿಂದ ನಡೆದಾಡಿದ ದೇವರ ಅಂತಿಮ ದರ್ಶನ- ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿಗೆ ಡಿಸಿ ಡಾ. ದಾನಮ್ಮನವರ ಕೃತಜ್ಞತೆ

ವಿಜಯಪುರ: ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತರು ಲಿಂ. ಸಿದ್ಧೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ನಗರದ ಜ್ಞಾನಯೋಗಾಶ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜ. 2ರ ಮಧ್ಯರಾತ್ರಿಯಿಂದ ಜ. 3ರ ರಾತ್ರಿ ಅಂತ್ಯಕ್ರಿಯೆಯವರೆಗೂ ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತರು ಸಿದ್ಧೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದಿದ್ದಾರೆ.  ವಿಜಯಪುರ ಜಿಲ್ಲೆ ಮಾತ್ರವಲ್ಲ ಬೇರೆ ಬೇರೆ ಜಿಲ್ಲೆಗಳು ಮತ್ತು ರಾಜ್ಯಗಳಿಂದಲೂ ಆಗಮಿಸಿದ ಭಕ್ತಾದಿಗಳು ಶಾಂತಿಯುತವಾಗಿ ದರ್ಶನ […]

ನದಿ, ಸಾಗರ ಸೇರಿದಂತೆ ಐದು ಕಡೆಗಳಲ್ಲಿ ಲಿಂ. ಸಿದ್ಧೇಶ್ವರ ಸ್ವಾಮೀಜಿ ಚಿತಾಭಸ್ಮ ವಿಸರ್ಜನೆ – ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಮಾಹಿತಿ

ವಿಜಯಪುರ: ಬಸವನಾಡಿನ ನಡೆದಾಡಿದ ದೇವರು ಲಿಂ. ಸಿದ್ಧೇಶ್ವರ ಸ್ವಾಮೀಜಿ ಅವರ ಚಿತಾಭಸ್ಮವನ್ನು ಒಂದು ಸಾಗರ ಮತ್ತು ನಾಲ್ಕು ನದಿಗಳಲ್ಲಿ ವಿಸರ್ಜಿಸಲಾಗುವುದು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಜ್ಞಾನಯೋಗಾಶ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬುದ್ದೀಜಿಯವರ ಅಂತ್ಯಕ್ರಿಯೆ ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆದಿದೆ.  ನಮ್ಮ ನಿರೀಕ್ಷೆಗೂ ಮೀರಿ ಭಕ್ತರು ಅಂತಿಮ ದರ್ಶನ ಪಡೆದಿದ್ದಾರೆ ಎಂದು ತಿಳಿಸಿದರು. ಸರಕಾರ, ಸಂಘ ಸಂಸ್ಥೆಗಳು, ಸ್ವಯಂ ಪ್ರೇರಿತರಾಗಿ ಕೆಲಸ ಮಾಡಿದ್ದಾರೆ.  ಕೆಲವರಂತೂ ಸ್ವಯಂ ಪ್ರೇರಿತರಾಗಿ ತಂತಮ್ಮ ಮನೆಗಳಲ್ಲಿ […]

ತಮ್ಮಿಚ್ಛೆಯಂತೆ ನಿಸರ್ಗದಲ್ಲಿ ಲೀನರಾದ ಬಸವ ನಾಡಿನ ನಡೆದಾಡಿದ ದೇವರು- ಸಂಪೂರ್ಣ ಶಾಂತಿಯತವಾಗಿ ಎಲ್ಲ ವಿಧಿವಿಧಾನ ನೆರವೇರಿಸಿದ ಜಿಲ್ಲಾಡಳಿತ

ವಿಜಯಪುರ: ಬಸವ ನಾಡಿನ ನಡೆದಾಡಿದ ದೇವರು ನಿಸರ್ಗದಲ್ಲಿ ಲೀನರಾಗಿದ್ದಾರೆ.  ಅವರ ಇಚ್ಛೆಯಂತೆಯೇ ಅಂತ್ಯಕ್ರಿಯೆ ನಡೆದಿದ್ದು, ಮಂಗಳವಾರ ಇಡೀ ದಿನ ಸುಮಾರು 20 ಲಕ್ಷಕ್ಕೂ ಹೆಚ್ಚು ಜನ ಲಿಂ. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದಿದ್ದಾರೆ. ನಾಡು ಕಂಡ ಅಪರೂಪದ ಸಂತ, ನಡೆದಾಡುವ ದೇವರೆಂದು ಕರೆಯಲಾಗುವ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಗಳ ಅಂತಿಮ ಸಂಸ್ಕಾರವನ್ನು ರಾತ್ರಿ 8.50ರ ಸುಮಾರಿಗೆ ವಿಜಯಪುರ ನಗರದ ಜ್ಞಾನಯೋಗಾಶ್ರಮದ ಆವರಣದಲ್ಲಿ ನೆರವೇರಿಸಲಾಯಿತು.  ಸಂಜೆ 5 ಗಂಟೆಗೆ ನಗರದ ಸೈನಿಕ ಶಾಲೆಯ ಆವರಣದಲ್ಲಿ ಸಿದ್ದೇಶ್ವರ […]

ನಡೆದಾಡಿದ ದೇವರ ದರ್ಶನಕ್ಕೆ ಬಂದ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿ ಬಸವ ನಾಡಿನ ಬಿ ಎಲ್ ಡಿ ಇ ಸಂಸ್ಥೆ

ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ಧೇಶ್ವರು ಸ್ವಾಮೀಜಿ ಲಿಂಗೈಕ್ಯರಾಗಿರುವ ಸುದ್ದಿ ಭಕ್ತರಿಗೆ ಬರಸಿಡಿಲಿನಂತೆ ಬಂದೆರಗಿದೆ.  ಇದರಿಂದ ಅಘಾತಗೊಂಡಿರುವ ಲಕ್ಷಾಂತರ ಭಕ್ತರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಬಸವನಾಡು ವಿಜಯಪುರ ನಗರಕ್ಕೆ ಸಮರೋಪಾದಿಯಲ್ಲಿ ದೌಡಾಯಿಸಿದ್ದಾರೆ. ಈ ಭಕ್ತಾದಿಗಳಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ವಿಜಯಪುರ ನಗರವನ್ನು ಪ್ರವೇಶಿಸುವ ನಾಲ್ಕೂ ದಿಕ್ಕುಗಳಲ್ಲಿ ಪ್ರಸಾದ ವ್ಯವಸ್ಥೆ ಮಾಡಿದ್ದಾರೆ.  ನಾಲ್ಕೂ ದಿಕ್ಕುಗಳಲ್ಲಿ ಭಕ್ತಾದಿಗಳಿಗೆ ಉಪ್ಪಿಟ್ಟು, ಪಲಾವ, ಚಹಾ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಈವರೆಗೆ […]

ಶ್ರೀಗಳ ಅಂತಿಮ ದರ್ಶನ, ಅಂತಿಮ ಯಾತ್ರೆ, ಅಂತ್ಯಕ್ರಿಯೆ ಶಾಂತಿಯುತವಾಗಿ ನಡೆಸಲು ಸಹಕರಿಸಿ- ಸಿಎಂ ಬಸವರಾಜ ಬೊಮ್ಮಾಯಿ ಮನವಿ- ಜಿಲ್ಲಾಡಳಿತ ಕಾರ್ಯಕ್ಕೆ ಮೆಚ್ಚುಗೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಸವನಾಡು ವಿಜಯಪುರಕ್ಕೆ ಆಗಮಿಸಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದಿದ್ದಾರೆ.  ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಡಿದಾಳಗಳಲ್ಲಿ ನಮಸ್ಕರಿಸಿ, ಇಲ್ಲಿ ನೆರೆದ ಎಲ್ಲ ಪರಮಪೂಜ್ಯರು ಮತ್ತು ಎಲ್ಲ ಮುಖಂಡರಲ್ಲಿ ನಮಸ್ಕರಿಸಿ, ಅಪಾರ ಸಂಖ್ಯೆಯಲ್ಲಿ ಬಂದಿರುವ ಭಕ್ತಾದಿಗಳಲ್ಲಿ ಒಂದು ಮನವಿ ಮಾಡು್ತತಿದ್ದೇೆ.  ಇವತ್ತು ದೊಡ್ಡ ಸಂಖ್ಯೆಯಲ್ಲಿ ಭಕ್ತಾದಿಗಳು ಹರಿದು […]