ಸಂಸ್ಕೃತ, ವೈದಿಕ ಸಂಸ್ಕಾರ ಒಂದು ತಿಂಗಳ ಶಿಬಿರ ಮುಕ್ತಾಯ- ಸಮಾರೋಪ ಸಮಾರಂಭದಲ್ಲಿ ನಾಗಠಾಣ ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಭಾಗಿ

ವಿಜಯಪುರ: ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಮತ್ತು ಗುರುಪಾದಯ್ಯ ಶ್ರೀಶೈಲ ಗಚ್ಚಿನಮಠ ಇವರ ಸಹಯೋಗದೊಂದಿಗೆ ನಗರದ ಸಂಗನಬಸವ ಮಂಗಲ ಕಾರ್ಯಾಲಯದಲ್ಲಿಆಯೋಜಿಸಲಾಗಿದ್ದ ಸಂಸ್ಕೃತ ಮತ್ತು ವೈದಿಕ ಸಂಸ್ಕಾರ ಕುರಿತ ಒಂದು ತಿಂಗಳ ಶಿಬಿರ ಮುಕ್ತಾಯವಾಗಿದೆ. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ನಾಗಠಾಣ ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ, ವೀರಶೈವ ಪರಂಪರೆಯಲ್ಲಿ ಆಚಾರ, ವಿಚಾರ, ವೈದಿಕತ್ವ ಸಂಸ್ಕಾರಗಳಂಥ ಶಿಬಿರಗಳನ್ನು ಆಯೋಜಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಇದೇ ವೇಳೆ ಗುರುಪಾದಯ್ಯ ಗಚ್ಚಿನಮಠ ಮತ್ತು ವಿಜಯಮಾಹಾಂತೇಶ್ವರಿ ಗುರುಪಾದಯ್ಯ ಗಚ್ಚಿನಮಠ ದಂಪತಿಯ 25ನೇ ವಿವಾಹ ವಾರ್ಷಿಕೋತ್ಸವ […]

ನಾರದರು ಬುದ್ದಿವಾದದ ಮೂಲಕ ಲೋಕೋದ್ದಾರ ಮಾಡಿದ ಮಹಾನ್ ದೇವ- ಡಾ. ಸಂಜೀವ ಜೋಶಿ

ವಿಜಯಪುರ:  ನಾರದ ಮುನಿಗಳು ಬುದ್ದಿವಾದದ ಮೂಲಕ ಲೋಕಾದ್ಧಾರ ಮಾಡಿದ ಮಹಾನ್ ದೇವ ಎಂದು ಡಾ. ಆಯುರ್ವೇದ ವೈದ್ಯ ಡಾ. ಸಂಜೀವ ಜೋಶಿ ಹೇಳಿದ್ದಾರೆ. ಮಂಥನ ವಿಜಯಪುರ ಚಿಂತಕರ ಚಾವಡಿ ಆದ್ಯ ಪತ್ರಕರ್ತ ದೇವಋಷಿ ನಾರದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾರದ ಮುನಿಗಳು ಧೃವ ಒಂದು ತಾರೆಯಾಗಲು, ಪ್ರಹ್ಲಾದ ಭಕ್ತ ಪ್ರಹ್ಲಾದನಾಗಲು ಪ್ರೇರಣೆಯಾಗಿದ್ದಾರೆ.  ಅಷ್ಟೇ ಅಲ್ಲ, ಅನೇಕರ ಬದುಕನ್ನೇ ಉದ್ಧಾರ ಮಾಡಿದ್ದಾರೆ.  ನಾರದ ಮುನಿ ಎಂದರೆ ಈ ವಿಷಯ ಅಲ್ಲಿಗೆ, ಅಲ್ಲಿನ ವಿಷಯ ಇಲ್ಲಿಗೆ ಹೇಳುತ್ತಾರೆ ಎಂಬುದು […]

ಧರ್ಮಸ್ಥಳಕ್ಕೆ ಸಿಎಂ, ಡಿಸಿಎಂ‌ ಭೇಟಿ- ಮಂಜುನಾಥನ ದರ್ಶನ‌ ಪಡೆದ ಸಿದ್ಧರಾಮಯ್ಯ, ಶಿವಕುಮಾರ

ಮಂಗಳೂರು: ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕ. ಶಿವಕುಮಾರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದರು.   ಅಲ್ಲದೇ, ವಿಶೇಷ ಪೂಜೆ ಸಲ್ಲಿಸಿದ ಮುಖಂಡರು ದೇವರ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು. ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಸಿಎಂ, ಡಿಸುಎಂ ಮತ್ತು ಸಚಿವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಚ್. ಸಿ. ಮಹದೇವಪ್ಪ, ಬೈರತಿ ಸುರೇಶ, ಕೆ. ವೆಂಕಟೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]

ಪುರಾಣ ಪ್ರವಚನ ಕೇಳುವುದರಿಂದ ಮನಸು ಹಸನಾಗುತ್ತದೆ- ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ

ವಿಜಯಪುರ: ಪುರಾಣ ಪ್ರವಚನ ಕೇಳುವುದರಿಂದ ಮನಸು ಹಸನಾಗುತ್ತದೆ ಎಂದು ಮನಗೂಳಿ ಸಂಸ್ಥಾನ ಹಿರೇಮಠದ ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯರು  ಹೇಳಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದ ಆವರಣದಲ್ಲಿ ನಡೆದ ಲಿಂಗೈಕ್ಯ ಶತಾಯುಷಿ ಶ್ರೀ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ.41 ಪುಣ್ಯಸ್ಮರಣೋತ್ಸವ ಮತ್ತು ಜಗದ್ಗುರು ಡಾ. ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಪುರಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಅ;ರು ಮಾತನಾಡಿದರು. ಪುರಾಣ ಪ್ರವಚನ ಕೇಳುವುದರಿಂದ ಮನುಷ್ಯನಿಗೆ ಸಂಸ್ಕಾರ ತಿಳಿಯುತ್ತದೆ.  ಸಂಸಾರದ […]

ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ- ಎಲ್ಲ ಧರ್ಮದವರೂ ಒಂದು ತಾಯಿಯ ಮಕ್ಕಳಂತಿರಬೇಕು- ಎಸ್. ಸಿದ್ಧರಾಮಯ್ಯ

ಬೆಂಗಳೂರು: ಎಲ್ಲ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನ್ ದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿ ಗಳಿಗೆ ಬೀಳ್ಕೊಡುಗೆ ಸಮಾರಂಭ ದಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. 10168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ […]

ಕೊಡದಿಂದ 6000 ಲೀ. ಸಾಮರ್ಥ್ಯದ ಓಕುಳಿ ಹೊಂಡ ತುಂಬಿದ ಶ್ರೀ ಮಾರತೇಶ್ವರ ಭಕ್ತ ಚಂದನಗೌಡ ಶಿವಪ್ಪಗೌಡ ಕೊಡಗಾನೂರ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆ ದೇಶದಲ್ಲಿಯೇ ಅತೀ ಹೆಚ್ಚು ಮತ್ತು ವಿಶಿಷ್ಠ ಜಾತ್ರೆಗಳಿಗೆ ಹೆಸರುವಾಸಿ.  ಜಿಲ್ಲೆಯಲ್ಲಿ ವರ್ಷವಿಡೀ ಒಂದಿಲ್ಲೋಂದು ಊರಿನಲ್ಲಿ ಒಂದಿಲ್ಲೋಂದು ಜಾತ್ರೆಗಳು ನಡೆಯುತ್ತಲೇ ಇರುತ್ತವೆ.  ಈ ಜಾತ್ರೆಗಳಲ್ಲಿ ಭಕ್ತರು ತಮ್ಮಿಷ್ಠದ ಹರಕೆ ಹೊತ್ತು ಬಯಕೆ ಈಡೇರಿದ ಬಳಿಕ ಹರಕೆ ತೀರಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುತ್ತಿರುತ್ತಾರೆ. ಈ ಸುದ್ದಿ ಕೂಡ ಅಂಥದ್ದೆ ಒಂದು ವಿಶೇಷತೆಯಿಂದ ಕೂಡಿದೆ.  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ಗ್ರಾಮದ ಬಿ.ಎಸ್ಸಿ ಓದುತ್ತಿರುವ ಯುವಕ ಚಂದನಗೌಡ ಶಿವಪ್ಪಗೌಡ ಕೊಡಗಾನೂರ ವಿನೂತನವಾಗಿ ದೇವರ […]

ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ. ಮಲ್ಲಿಕಾರ್ಜುನ ಮೇತ್ರಿ

ವಿಜಯಪುರ: ಯುವ ಜನರು ನಮ್ಮ ಹಿಂದಿನ ಗತಕಾಲದ ವೈಭವವನ್ನು ಅರಿಯುವ ದೃಷ್ಟಿಕೋನ ಹೊಂದಿರಬೇಕು. ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಸಿಕಾಬ್ ಎ.ಆರ್‌.ಎಸ್‌.ಐ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎಸ್. ಮೇತ್ರಿ ಹೇಳಿದರು. ಭಾರತೀಯ ಪುರಾತತ್ವ ಸರ್ವೇಕ್ಷಣ, ಧಾರವಾಢ ವಲಯದ ವತಿಯಿಂದ ಗೋಳಗುಮ್ಮಟದ ಆವರಣದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂತಾರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಇತಿಹಾಸವನ್ನು ತಿಳಿಯದವನ್ನು ಇತಿಹಾಸವನ್ನು ಸೃಷ್ಟಿಸಲಾರ ಎಂಬ ಮಾತಿದೆ. ಅದರಂತೆ ತಮ್ಮ ಊರಿನಲ್ಲಿ […]

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಭಗಿರಥ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಭಗಿರಥ ಜಯಂತಿಯನ್ನು ಆಚರಿಸಲಾಯಿತು. ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.  ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಶ್ರೀ ಭಗಿರಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಅಯ್ಯೂಬ ದ್ರಾಕ್ಷಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಜಕ್ಕಪ್ಪ ಯಡವೆ, […]

ವಿದ್ಯಾರ್ಥಿಯನ್ನು ಶೈಕ್ಷಣಿಕವಾಗಿ ದತ್ತು ಪಡೆದು ಬಸವ ಜಯಂತಿ ಆಚರಿಸಿದ ಶರಣ ಸಂಗಮೇಶ ಬಬಲೇಶ್ವರ ದಂಪತಿ

ವಿಜಯಪುರ: ನಗರದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟಿನ ಸಂಸ್ಥಾಪಕ ಮತ್ತು ಶರಣ ಸಂಗಮೇಶ ಬಬಲೇಶ್ವರ ದಂಪತಿ ಬಡ ವಿದ್ಯಾರ್ಥಿಯೊಬ್ಬನನ್ನು ಶೈಕ್ಷಣಿಕವಾಗಿ ದತ್ತು ಪಡೆದು ಬಸವ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ನಗರದಲ್ಲಿರುವ ಟ್ರಸ್ಚಿನ ಕಾರ್ಯಾಲಯದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿದ್ಯಾರ್ಥಿ ಅಶೋಕ ಜಾಧವ ಅವರನ್ನು ದತ್ತು ಪಡೆದು ಸಂಗಮಶ ಮತ್ತು ಅವರ ಪತ್ನಿ ಶ್ವೇತಾ ಬಬಲೇಶ್ವರ ದಂಪತಿ ಬಸವೇಶ್ವರರ ಆಶಯಗಳಿಗೆ ತಕ್ಕಂತೆ ಸಮಾಜಮುಖಿ ಕಾರ್ಯ ಮಾಡಿದರು. ದತ್ತು ಪಡೆಯಲು […]

ಬಸವ ನಾಡಿನಲ್ಲಿ ಜಿಲ್ಲಾಡಳಿತದಿಂದ ಬಸವ ಜಯಂತಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ಲೋಕಸಭೆ ಚುನಾವಣೆ ಹಿನ್ನೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಸೀಲ್ದಾರ ಕವಿತಾ ಅವರು ಬಸವಣ್ಣ ಮತ್ತು ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು. ಇದಕ್ಕೂ ಮೊದಲು […]