Shrishail Seer Padayatre: ಶ್ರೀಶೈಲ ಜಗದ್ಗುರುಗಳ ಪಾದಯಾತ್ರೆ ನ. 6 ರಂದು ಬಸವ ನಾಡಿಗೆ ಆಗಮನ

ವಿಜಯಪುರ:  ಶ್ರೀಶೈಲದ ಡಾ. ಚನ್ನಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಶ್ರೀ ಕ್ಷೇತ್ರ ಯಡೂರದಿಂದ ಶ್ರೀಶೈಲ ಕ್ಷೇತ್ರದ ವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪಾದಯಾತ್ರೆಯು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮಕ್ಕೆ ಆಗಮಿಸಲಿದೆ.  ಅಂದು ಬೆ. 7 ಕ್ಕೆ ಸಾರವಾಡದಿಂದ ಹೊರಟು ಮಧ್ಯಾಹ್ನ ವಿಜಯಪುರದ ಮಿಲನ ಪೇಟ್ರೋಲ್ ಪಂಪನಲ್ಲಿ ಭೋಜನ ಮುಗಿಸಿ, ಜೋರಾಪೂರದ ಶಂಕರಲಿಂಗ ದೇವಸ್ಥಾನಕ್ಕೆ ತೆರಳಲಿದೆ. ಅಲ್ಲಿಂದ ವಿಜಯಪುರ ನಗರದ ಗ್ರಾಮದೇವತೆ ಶ್ರೀ ಸಿದ್ದೇಶ್ವರ […]

Rajyotsava Inamadar: ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು- ಡಾ. ಅರುಣ ಇನಾಮದಾರ

ವಿಜಯಪುರ: ಕನ್ನಡ ರಾಜ್ಯೋತ್ಸವ ಒಂದು ದಿನಕ್ಕೆ ಸೀಮತವಾಗದೇ ನಿತ್ಯೋತ್ಸವ ಆಗಬೇಕು ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ಅರುಣ ಇನಾಮದಾರ ಹೇಳಿದರು. ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ನಡೆದ 67ನೇ ಕರ್ನಾಟಕ ರಾಜ್ಯೋತ್ಸವವನ್ನು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ಆಲೂರು ವೆಂಕಟರಾಯರು ಸೇರಿದಂತೆ ಇತರ ಮಹನೀಯರ ಕೊಡುಗೆ ಅನನ್ಯ.  ಎಲ್ಲ ವೈದ್ಯಕೀಯ ವಿಭಾಗದ ವೈದ್ಯರು ರೋಗಿಗಳೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕು ಎಂದು ಡಾ. ಅರುಣ ಇನಾಮದಾರ ಹೇಳಿದರು. […]

Rajyotsava Award: ಪ್ರದೀಪ ಕುಲಕರ್ಣಿ, ಸಚ್ಚೇಂದ್ರ ಲಂಬು, ಅನ್ನಪೂರ್ಣ ಭೋಸ್ಲೆ ಸೇರಿ 20 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ವಿಜಯಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ಪತ್ರಕರ್ತರಾದ ಪ್ರದೀಪ ಕುಲಕರ್ಣಿ, ಸಚ್ಚೆಂದ್ರ ಲಂಬು, ಕ್ರಿಕೆಟ್ ಆಟಗಾರ್ತಿ ಅನ್ನಪೂರ್ಣ ಭೋಸಲೆ ಸೇರಿದಂತೆ ಒಟ್ಟು 20 ಜನರಿಗೆ ಈ ಬಾರಿ ಪ್ರಶಸ್ತಿ ಪ್ರಕಟಿಸಲಾಗಿದೆ.  ಮಂಗಳವಾರ ನಗರದಲ್ಲಿರುವ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಮತ್ತು ನಾನಾ ಜನಪ್ರತಿನಿಧಿಗಳು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ನಾನಾ ಕ್ಷೇತ್ರಗಳ ಪ್ರಶಸ್ತಿ ಪುರಸ್ಕೃತರು, ಅವರ ಊರುಗಳ ಮಾಹಿತಿ ಇಲ್ಲಿದೆ ಹೆಸರುಗಳು ಇಲ್ಲಿವೆ ಸಾಹಿತ್ಯ ವಿವೇಕಾನಂದ ಕಾಸಪ್ಪ ಕಲ್ಯಾಣಶೆಟ್ಟಿ- […]

Deepavali Celebration: ಬಸವ ನಾಡಿನಲ್ಲಿ ದೀಪಾವಳಿ ಸಂಭ್ರಮ- ಪಟಾಕಿಗಳ ಮಾರಾಟ, ಖರೀದಿ ಜೋರು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ, ಸಡಗರ ಮನೆ ಮಾಡಿದೆ.  ಬೆಳಿಗ್ಗೆಯಿಂದಲೇ ಹಿಂದೂಗಳು ಪವಿತ್ರ ದೀಪಾವಳಿ ಹಬ್ಬದ ಆಚರಣೆಯಲ್ಲಿ ತೊಡಗಿದ್ದು, ಹೊಸ ಬಟ್ಟೆ ತೊಟ್ಟು ಸಂಭ್ರಮಿಸುತ್ತಿದ್ದಾರೆ. ಈ ಮಧ್ಯೆ, ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಸಾಕಷ್ಟು ಕಡಿಮೆಯಾಗಿದ್ದ ಪಟಾಕಿಗಳ ಮಾರಾಟ ಮತ್ತು ಖರೀದಿ ಈ ಬಾರಿ ಮತ್ತೆ ಗತವೈಭವಕ್ಕೆ ಮರಳಿದೆ.  ವಿಜಯಪುರ ನಗರದ ವಿಠ್ಠಲ ಮಂದಿರ ರಸ್ತೆಯಲ್ಲಿರುವ ಪಟಾಕಿ ಅಂಗಡಿಗಳಲ್ಲಿ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಕೊರೊನಾ ಸೋಂಕಿನ ಭಯದಿಂದ ಕಳೆದ […]

Chennamma Jayanti:: ವಿಜಯಪುರ ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣ, ಅತ್ಯಂತ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಪುಷ್ಪ ನಮನ ಸಲ್ಲಿಸಿದರು. ನಂತರ ಎಲ್ಲರಿಗೂ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಜಿಲ್ಲಾ ಪಂಚಮಸಾಲಿ […]

Short Film Shooting: ಕಥೆಗಾರ ಡಾ. ಚನ್ನಪ್ಪ ಕಟ್ಟಿ ಅವರ ಊದ್ರ್ವರೇತ ಕಥೆಯಾಧಾರಿತ ಕಿರು ಚಲನಚಿತ್ರ ಶೂಟಿಂಗ್ ಆರಂಭ

ವಿಜಯಪುರ: ಜಿಲ್ಲೆ ಸಿಂದಗಿಯ ಕಥೆಗಾರ ಡಾ. ಚನ್ನಪ್ಪ ಕಟ್ಟಿ ಅವರ’ಊದ್ರ್ವರೇತ ಕಥೆಯಾಧಾರಿತ ಕಿರು ಚಲನಚಿತ್ರದ ಚಿತ್ರೀಕರಣ ವಿಜಯಪುರ ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಆವರಣದಲ್ಲಿರುವ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಭಾ ಭವನದಲ್ಲಿ ಪ್ರಾರಂಭವಾಯಿತು. ಕೇಂದ್ರದ ಕಾರ್ಯದರ್ಶಿ ಡಾ. ಎಂ. ಎಸ್. ಮದಭಾವಿ ಅವರು ಪೂಜೆ ಮಾಡುವ ಮೂಲಕ ಕಿಚು ಚಲನಚಿತ್ರ ಶೂಟಿಂಗ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ. ಎಸ್. ಬಿ. ಮಾಡಗಿ ಕ್ಲ್ಯಾಪ್ ಮಾಡಿದರು.  […]

Valmiki Kulkarni: ಮಹರ್ಷಿ ವಾಲ್ಕೀಕಿಯವರ ಜೀವನ, ತತ್ವಾದರ್ಶಗಳು ಇತರರಿಗೆ ಮಾದರಿ- ಡಾ. ಆರ್. ವಿ. ಕುಲಕರ್ಣಿ

ವಿಜಯಪುರ: ಮಹರ್ಷಿ ವಾಲ್ಮೀಕಿ ಜೀವನ ಮತ್ತು ತತ್ವ ಆದರ್ಶಗಳು ಇತರರಿಗೆ ಮಾದರಿಯಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿವಿ ರಿಜಿಸ್ಟಾರ್ ಡಾ. ಆರ್. ವಿ. ಕುಲಕರ್ಣಿ ಹೇಳಿದರು. ವಿಜಯಪುರ ನಗರದಲ್ಲಿರುವ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಆದಿ ಕಾಲದ ರಾಮಾಯಣ ಮಹತ್ವದ ಕುರಿತು ಯುವಜನತೆಗೆ ತಿಳಿಸಬೇಕಾಗಿದೆ.  ಅಲ್ಲದೇ, ತತ್ವ ಆದರ್ಶಗಳನ್ನು ಪರಿಪಾಲನೆ ಮಾಡುವಂತೆ ಮನವರಿಕೆ ಮಾಡಬೇಕಿದೆ ಎಂದು ಡಾ. ಆರ್. ವಿ. ಕುಲಕರ್ಣಿ ಹೇಳಿದರು. ಈ ಸಂದರ್ಭದಲ್ಲಿ ಉಪಪ್ರಾಚಾರ್ಯೆ ಡಾ. […]

Valmiki DC: ವಾಲ್ಮೀಕಿ ರಾಮಾಯಣ ಮಹಾಕಾವ್ಯದಲ್ಲಿ ಸಾಮಾಜಿಕ ಮೌಲ್ಯಗಳಿವೆ: ಡಾ. ವಿಜಯಮಹಾಂತೇಶ ಬಿ.‌ ದಾನಮ್ಮನವರ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ನಗರದಲ್ಲಿ ನಡೆಯಿತು. ಜಯಂತ್ಯುತ್ಸವ ಅಂಗವಾಗಿ ಮಹರ್ಷಿ ಶ್ರೀ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಗೆ ಶ್ರಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಎಸ್ಪಿ ಡಾ. ರಾಮ ಲಕ್ಷ್ಮಣಸಾ.ಅರಸಿದ್ದಿ ಚಾಲನೆ ನೀಡಿದರು. ನಾನಾ ಜಾನಪದ ಕಲಾ ತಂಡಗಳೊAದಿಗೆ ದೇವಸ್ಥಾನದ ಆವರಣದಿಂದ ಆರಂಭಚಾದ ಮೆರವಣಿಗೆಯು ಗಾಂಧಿ ವೃತ್ತ, ಬಸವೇಶ್ವರ […]

Dasara Wishes: ಭಾರತೀಯ ಪರಂಪರೆಯಲ್ಲಿ ವಿಜಯದಶಮಿ ಹಬ್ಬಕ್ಕೆ ವಿಶೇಷ ಸ್ಥಾನವಿದೆ- ಉಮೇಶ ಕಾರಜೋಳ

ವಿಜಯಪುರ: ಭಾರತಿಯ ಪರಂಪರೆಯಲ್ಲಿ ವಿಜಯದಶಮಿ ಹಬ್ಬಕ್ಕೆ ವಿಶೇಷವಾದ ಸ್ಥಾನವಿದೆ.  ಈ ಹಬ್ಬ ಅನ್ಯಾಯದ ವಿರುದ್ಧ ಜಯಗಳಿಸಿದ ವಿಜಯದ ಸಂಕೇತವಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹೇಳಿದ್ದಾರೆ. ವಿಜಯಪುರ ನಗರದಲ್ಲಿರುವ ಸ್ವಗೃಹದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಜಯದಶಮಿ ಹಬ್ಬ ಭಾರತಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ.  ವಿಜಯದ ಸಂಕೇತವಾಗಿಯೂ ಇದನ್ನು ಆಚರಿಸಲಾಗುತ್ತದೆ.  ಅದರಲ್ಲೂ ಬನ್ನಿ ವಿನಿಮಯದಿಂದ ಪರಸ್ಪರ ಸ್ನೇಹ, ಪ್ರೀತಿ, ವಾತ್ಸಲ್ಯದಿಂದ ಬದುಕು ಸಾಗಿಸುವ ಭರವಸೆ ಮೂಡುತ್ತದೆ ಎಂದು ಅವರು ಹೇಳಿದರು. […]

Paigambar Jayanti: ಪ್ರವಾದಿ ಹಜರತ್ ಮೊಹಮ್ಮದ ಪೈಗಂಬರ ಜಯಂತಿ ಅಂಗವಾಗಿ ಗುಮ್ಮಟ ನಗರಿಯಲ್ಲಿ ನಾನಾ ಕಾರ್ಯಕ್ರಮ ಆಯೋಜನೆ- ತನ್ವೀರ್ ಪೀರಾ ಹಾಶ್ಮಿ

ವಿಜಯಪುರ: ಪ್ರವಾದಿ ಹಜರತ್ ಮೊಹ್ಮದ್ ಪೈಗಂಬರ್ ಅವರ ಜಯಂತೋತ್ಸವ(ಈದ್ ಮಿಲಾದುನ್ನಬಿ)ಯನ್ನು ಈ ಬಾರಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಹಲವಾರು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಅಹಲೆ ಸುನ್ನತ್ ಜಮಾತ್ ಅಧ್ಯಕ್ಷ ಹಾಗೂ ಧರ್ಮಗುರು ಹಜರತ್ ಸೈಯ್ಯದ್ ತನ್ವೀರ ಪೀರಾ ಹಾಶ್ಮಿ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಹಮ್ಮದ ಪೈಗಂಬರ್ ಅವರು ಶಾಂತಿ, ಸಮಾನತೆ, ಮಾನವೀಯತೆ ಮೌಲ್ಯಗಳನ್ನು ಪ್ರತಿಪಾದಿಸಿದ್ದಾರೆ.  ಅವರ ಚಿಂತನೆಗಳು ಸಾರ್ವಕಾಲಿಕವಾಗಿದ್ದು, ಅವರ ಆಶಯಗಳಂತೆ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಈಗಾಗಲೇ ಅ. 5 […]