ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ- ಪ್ರಕಾಶ ಅಕ್ಕಲಕೋಟ

ವಿಜಯಪುರ: ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದ ಅವಿನಾಭಾವ ಸಂಬಂಧವಿದ್ದು, ಇಂದಿಗೂ ಎಲ್ಲಾ‌ ರೀತಿಯಲ್ಲಿ ಸಹಕಾರ ನೀಡುತ್ತಾ ನಮಗೆ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹೇಳಿದ್ದಾರೆ. ನಗರದ ಬಿಜೆಪಿ‌ ಚುನಾವಣೆ ಕಾರ್ಯಾಲಯದಲ್ಲಿ‌ ನಡೆದ ಭಗವಾನ್ ಮಹಾವೀರ‌ ಜಯಂತೋತ್ಸವ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.  ದೇಶದಲ್ಲಿಯೇ ಅತೀ ಹೆಚ್ಚು ಶ್ರೀಮಂತಿಕೆ ಸಮಾಜವಾಗಿದ್ದರೂ ಜೈನರು ತಮ್ಮ ಶೇ. 70 ರಷ್ಟು ಆದಾಯವನ್ನು ಸಮಾಜಕ್ಕೆ ಅರ್ಪಿಸುವ ಹೃದಯಶ್ರೀಮಂತಿಕೆ ಹೊಂದಿದ್ದಾರೆ.  ದೇಶದಲ್ಲಿಯೇ ಅತೀ ಹೆಚ್ಚು […]

ಅಂಬೇಡ್ಕರ ಜಯಂತಿ: ಸಚಿವ ಎಂ. ಬಿ. ಪಾಟೀಲ ಅವರಿಂದ ಸಂವಿಧಾನ ಶಿಲ್ಪಿಯ ಪುತ್ಥಳಿಗೆ ಗೌರವ ನಮನ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ. ಇಂದು ರವಿವಾರ ನಗರದ ಅಂಬೇಡ್ಕರ್ ಚೌಕಿಗೆ ತೆರಳಿದ ಸಚಿವರು, ಜಯಂತಿ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಪ್ರೊ. ರಾಜು ಆಲಗೂರ, ಷಹಜಹಾನ್ ಮುಲ್ಲಾ, […]

ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರ- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಮಹಾನ್ ನಾಯಕರಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿಗೆ ಮಾದರಿಯಾದ ಸಂವಿಧಾನದ ನೀಡಿದ್ದಾರೆ. ದೇಶಕ್ಕೆ ನೀಡಿರುವ ಕೊಡುವೆ ಅಪಾರವಾದದ್ದು. ಆ ಕೊಡುಗೆಗಳನ್ನು ಸ್ಮರಿಸುವ ಹಾಗೂ ಅವರ ಉದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ […]

ಅಂಬೇಡ್ಕರ್ ಅವರನ್ನು ಪ್ರತಿನಿತ್ಯ ಸ್ಮರಿಸುವ ಕಾರ್ಯವಾಗಬೇಕು- ಡಿಸಿ ಟಿ. ಭೂಬಾಲನ್

ವಿಜಯಪುರ: ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಪ್ರತಿನಿತ್ಯ ಸ್ಮರಿಸಿ ಅವರ ಸಂದೇಶಗಳನ್ನು ಪಾಲಿಸುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ರವಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರವರು ಬಡವರು, ಪರಿಶಿಷ್ಟ ಜಾತಿ, […]

ಮಗು ಸಾತ್ವಿಕ, ಪೋಷಕರು, ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೋಂಡವರಿಗೆ ಲಚ್ಚಾಣದಲ್ಲಿ ಸನ್ಮಾನ

ವಿಜಯಪುರ: ತೆರೆದ ಕೊಳವೆ ಭಾವಿಗೆ ತಲೆ ಕೆಳಗಾಗಿ ಬಿದ್ದು 20 ಗಂಟೆಗಳ ನಂತರ ಸಾವನ್ನು ಜಯಿಸಿ ಬಂದ 13 ತಿಂಗಳ ಮಗು ಸಾತ್ವಿಕ ಮುಜಗೊಂಡ ಮತ್ತು ಆತನ ಪೋಷಕರನ್ನು ಇಂಡಿ ತಾಲೂಕಿನ ಸುಕ್ಷೇತ್ರ ಲತ್ಚಾಣದಲ್ಲಿ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಆಶೀರ್ವದಿಸಲಾಯಿತು. ಲಚ್ಯಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ರಾತ್ರಿ ನಡೆದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಬಂಥನಾಳದ ಡಾ. ವೃಷಭಲಿಂಗ ಮಹಾಶಿವಹಿಗಳ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರವಚನಕಾರ ಮಹಾಂತೀಯ ಶಾಸ್ತ್ರಗಳು ಸನ್ಮಾನಿಸಿ ಗೌರವಿಸಿದರು. ಈ […]

ಕತಕನಹಳ್ಳಿ ಜಾನುವಾರು ಜಾತ್ರೆ ಪ್ರಾರಂಭ- ಶಾಸಕ ಸುನೀಲಗೌಡ ಪಾಟೀಲ ಚಾಲನೆ

ವಿಜಯಪುರ: ತಾಲೂಕಿನ ಸುಕ್ಷೇತ್ರ ಕತಕನಹಳ್ಳಿ ಶ್ರೀ ಗುರುಚಕ್ರವರ್ತಿ ಸದಾಶಿವ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಜಾನುವಾರು ಜಾತ್ರೆಗೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಚಾಲನೆ ನೀಡಿದರು. ಮಠದ ಶ್ರೀ ಶಿವಯ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುನೀಲಗೌಡ ಪಾಟೀಲ ಜಾನುವಾರು ಜಾತ್ರೆ ಉದ್ಘಾಟಿಸಿದರು.  ಅಲ್ಲದೇ, ಗೋಮಾತೆಗೆ ಪೂಜೆ ಸಲ್ಲಿಸಿದರು.   ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಉದ್ಯಮಿ ಬಾಬುಗೌಡ ಬಿರಾದಾರ, ಮುಖಂಡರಾದ ಬಸವರಾಜ ಕೌಲಗಿ, ಡಾ. ಗಂಗಾಧರ ಸಂಬಣ್ಣಿ, ಸಂಗಮೇಶ […]

ಬಾಹುಬಲಿಗೆ ನೈವೇದ್ಯ ಕಟಂಬಲಿ- ಬಸವ ನಾಡಿನಲ್ಲಿ ವಿಶಿಷ್ಠ ಜಾತ್ರೆಗೆ ಸಾಕ್ಷಿಯಾದ ರಂಭಾಪುರ ಜನತೆ

ವಿಜಯಪುರ:  ದೇಶದಲ್ಲಿಯೇ ಅತೀ ಹೆಚ್ಚು ಜಾತ್ರೆ ನಡೆಯುವ ಜಿಲ್ಲೆ ಬಸವನಾಡಿನ ವಿಜಯಪುರ.  ಈ ಲ್ಲೆಯಲ್ಲಿ ಪ್ರತಿದಿನ ಒಂದಿಲ್ಲೋಂದು ಊರಿನಲ್ಲಿ ಒಂದಿಲ್ಲೋಂದು ಜಾತ್ರೆಗಳು, ದೇವಸ್ಥಾನದ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ.  ಅದರಲ್ಲೂ ಒಂದೊಂದು ಊರಿನಲ್ಲಿ ಒಂದು ವಿಶೇಷ ಜಾತ್ರೆಗಳು ನಡೆಯುತ್ತವೆ.  ಕೆಲವು ಜಾತ್ರೆಗಳನ್ನು ಊರಿನ ಗ್ರಾಮಸ್ಥರೆಲ್ಲರೂ ಸೇರಿ ಆಚರಿಸಿದರೆ, ಮತ್ತೆ ಹಲವು ಜಾತ್ರೆಗಳನ್ನು ಒಂದೊಂದು ಕುಟುಂಬಗಳು ಕಾರ್ಯಕ್ರಮದ ರೂಪದಲ್ಲಿ ಆಚರಿಸುತ್ತವೆ. ಇಂಥ ವಿಶೇಷ ಜಾತ್ರೆಯೊಂದು ಗುಮ್ಮಟ ನಗರಿ ವಿಜಯಪುರದ ಹೊರಭಾಗದಲ್ಲಿರುವ ರಂಭಾಪುರ ಗ್ರಾಮದಲ್ಲಿ ನಡೆಯಿತು.  […]

ಸಾಮರಸ್ಯ, ಸಹಬಾಳ್ವೆ ಸಾರುವ ಮಾನವ ಧರ್ಮಕ್ಕೆ ಜಯವಾಗಲಿ- ಸೋಮನಾಥ ಶಿವಾಚಾರ್ಯರು

ವಿಜಯಪುರ: ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ, ಸರ್ವರಿಗೂ ಒಳಿತನ್ನು ಬಯಸುವ ಮಾನವ ಧರ್ಮಕ್ಕೆ ಜಯವಾಗಲಿ.  ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಜಗದ್ಗುರು ರೇಣುಕಾಚಾರ್ಯರ ಆಶೀರ್ವಾದ ಸದಾ ಎಲ್ಲರ ಮೇಲಿರಲಿ ಎಂದು ಕನ್ನೂರಿನ ಸೋಮನಾಥ ಶಿವಾಚಾರ್ಯರು ಹೇಳಿದ್ದಾರೆ. ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ನಡೆದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಗುಡ್ಡಾಪುರದ ಗುರುಪಾದೇಶ್ವರ ಶಿವಾಚಾರ್ಯರು, ಯುವ ಮುಖಂಡ ಗುರುಪಾದಯ್ಯ ಗಚ್ಚಿನಮಠ, ಸಂಜು ಹಿರೇಮಠ, ಚಿದಾನಂದ ಹಿರೇಮಠ, ಸಚೀನ ಬೂದಿಹಾಳಮಠ, ಅಭಿಷೇಕ […]

ಹೆಣ್ಣು ಅಬಲೆಯಲ್ಲ ಸಬಲೆ: ಶೈಲಜಾ ಪಾಟೀಲ

ವಿಜಯಪುರ: ಹೆಣ್ಣು ಅಬಲೆಯಲ್ಲ ಸಬಲೆ ಎಂದು ಶ್ರೀ ಸಿದ್ದೇಶ್ವರ ಅಕ್ಕನ ಬಳಗದ ಅಧ್ಯಕ್ಷೆ ಶೈಲಜಾ ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದ ಶ್ರೀ ಸಿದ್ಧೇಶ್ವರ ಕಲಾಭವನದಲ್ಲಿ ಸಮಸ್ತ ವಿಜಯಪುರ ಮಹಿಳೆಯರ ಶ್ರೀ ಸಿದ್ದೇಶ್ವರ ಅಕ್ಕನ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಅಂತeರಾಷ್ಟೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಂದು ಪುರುಷನಿಗಿಂತ ಒಂದು ಕೈ ಮೇಲೆ ಎನ್ನುವಷ್ಟರ ಮಟ್ಟಿಗೆ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಹೇಳಿದರು. ಕಣ್ಮರೆ ಆಗುತ್ತಿರುವ ವಚನ, ಪ್ರವಚನಗಳನ್ನು ಪ್ರಸಕ್ತ ಹಾಗೂ ಮುಂದಿನ […]

ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಕಮಿಟಿಯಿಂದ ಮಾ. 24 ರಿಂದ ಏ. 7ರ ವರೆಗೆ ಶ್ರೀಶೈಲವರೆಗೆ ಪಾದಯಾತ್ರೆ

ವಿಜಯಪುರ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಶ್ರೀಶೈಲ ಮಲ್ಲಯನ ದರ್ಶನಕ್ಕೆ ಪಾದಯಾತ್ರೆ ಪ್ರಾರಂಭಿಸಿದ ಖ್ಯಾತಿಯ ವಿಜಯಪುರ ನಗರದ ಜೋರಾಪುರ ಪೇಠ ಮಲ್ಲಯ್ಯನ ಓಣಿಯ ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಕಮಿಟಿಯ ಕಾರ್ಯಕ್ರಮ ಮಾ. 24 ರಿಂದ ಏ. 7ರ ವರೆಗೆ ನಡೆಯಲಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಮಿತಿಯ ಮುಖಂಡ ರವೀಂದ್ರ ಸಿದ್ದಯ್ಯ ಕರ್ಪೂರಮಠ, 31ನೇ ವರ್ಷದ ಪಾದಯಾತ್ರೆ ಇದಾಗಿದ್ದು, ಹೋಳಿ ಹುಣ್ಣಿಮೆಯ ದಿನದಿಂದ ಯುಗಾದಿಯವರೆಗೆ 15 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮಾ. 24 […]