ಗಾಂಧೀಜಿ ಕನಸು ನನಸು ಮಾಡುವಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ- ಜಾವೀದ ಜಮಾದಾರ

ವಿಜಯಪುರ: ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಮತ್ತು ಜವಾಬ್ದಾರಿ ಮಹತ್ವದ್ದಾಗಿದೆ. ಯುವಕರು ದೇಶದ ಪ್ರಗತಿಯಲ್ಲಿ ಸಕ್ರೀಯರಾಗಬೇಕು. ರಾಷ್ಟ್ರೀಯ ಏಕತೆ ಸಮಗ್ರತೆ ಕಾಪಾಡಲು ಪಣತೊಡಬೇಕ ಉ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತರ ಫೆಡರೇಶನ್‌ದ ರಾಷ್ಟ್ರೀಯ ಅಧ್ಯಕ್ಷ ಡಾ. ಜಾವೀದ ಜಮಾದಾರ ಹೇಳಿದ್ದಾರೆ. ವಿಜಯಪುರದಲ್ಲಿ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೇಂದ್ರ ನೆಹರು ಯುವಕ ಕೇಂದ್ರ, ವಿಜಯಪುರ ಜಿಲ್ಲಾಡಳಿತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್., ಕ್ಷೇತ್ರ ಜನಸಂಪರ್ಕ ಇಲಾಖೆ, ಬಿ ಎಲ್ ಡಿ […]

ಅಂಬೇಡ್ಕರ ಓರ್ವ ಮಹಾನ ಸಾಮಾಜಿಕ ಚಿಂತಕರು, ಸಮಾನತೆಯ ಹರಿಕಾರರು- ರಿಯಾಜ್ ಫಾರೂಕಿ

ವಿಜಯಪುರ: ಸಂವಿಧಾನ ಕತೃ ಡಾ. ಬಾಬಾಸಾಹೇಬ್ ಅಂಬೇಡ್ಕರ ಓರ್ವ ಸಾಮಾಜಿಕ ಚಿಂತಕಕರು.  ಸಮಾನತೆಯ ಹರಿಕಾರಾಗಿದ್ದರು ಎಂದು ಸಿಕ್ಯಾಬ್ ಎ. ಆರ್. ಎಸ್. ಇನಾಮದಾರ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದ ಅಧ್ಯಕ್ಷ ಡಾ. ರಿಯಾಜ ಫಾರೂಕಿ ಹೇಳಿದರು. ವಿಜಯಪುರ ನಗರದ ಜಲನಗರದಲ್ಲಿರುವ ಸಿಕ್ಯಾಬ್ ಎ ಆರ್ ಎಸ್ ಇನಾಮದಾರ ಕಲಾ, ವಿಜ್ಞಾನ, ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿದ್ಯಾರ್ಥಿನಿಯರಿಗೆ ಆಯೋಜಿಸಲಾದ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ […]

ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ವಿಜಯಪುರ ಹುತಾತ್ಮ ವೃತ್ತದಲ್ಲಿ ಹುತಾತ್ಮರ ದಿನ ಆಚರಣೆ

ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಸಂಸ್ಮರಣೆ ಹಿನ್ನೆಲೆಯಲ್ಲಿ ವಿಜಯಪುರ ನಗರದ ಹುತಾತ್ಮ ವೃತ್ತದಲ್ಲಿ ನಗರದ  ಹುತಾತ್ಮ ವೃತ್ತದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಯುವ ಜನಸೇವೆ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಭಾರತ ಸೇವಾ ದಳ ಹಾಗೂ ನೆಹರು ಯುವ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಹುತಾತ್ಮರ ದಿನವನ್ನು ಶ್ರದ್ಧಾ ಭಕ್ತಿಯಿಂದ  ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಹೆಚ್ಚುವರಿ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ, ವಿಜಯಪುರ ಉಪವಿಭಾಗಾಧಿಕಾರಿ […]

11 ಗೋವುಗಳನ್ನು ಅಜೀವ ದತ್ತು ಪಡೆದು ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ 62ನೇ ಹುಟ್ಟುಹಬ್ಬದ ಅಂಗವಾಗಿ ಒಟ್ಟು 11 ಹಸುಗಳನ್ನು ಆಜೀವ ದತ್ತು ಪಡೆಯುವ ಮೂಲಕ ಗೋರಕ್ಷಣೆಗೆ ಮೇಲ್ಪಂಕ್ತಿ ಹಾಕಿದ್ದಾರೆ.  ಬೆಂಗಳೂರಿನಲ್ಲಿ ರಾಷ್ಟ್ರೋತ್ಥಾನ ಗೋ ಶಾಲೆಯ 11 ಹಸುಗಳನ್ನು ಅವರು ತಮ್ಮ ಜನ್ಮದಿನದ ಅಂಗವಾಗಿ ದತ್ತು ಪಡೆದರು.  ಹುಟ್ಟುಹಬ್ಬದ ಅಂಗವಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಚೆನ್ನಮ್ಮ ಜೊತೆ ಮುಂಜಾನೆ ಹಸು ಮತ್ತು ಕರುವನ್ನು ಪೂಜೆ ನೆರವೇರಿಸಿದರು. ನಂತರ ಹಸುವನ್ನು ಮನೆಯಲ್ಲಿ ಕರೆದುಕೊಂಡು ಗೋವಿಗೆ ಗ್ರಾಸ ಹಾಕಿದರು.  ಈ ಮೂಲಕ ಗೋವುಗಳ […]

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ರೂ. 180 ಕೋ. ವೆಚ್ಚದಲ್ಲಿ ಮಿಲಿಟರಿ ಶಾಲೆ- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ರಾಜ್ಯ ಸರಕಾರ ರೂ. 180 ಕೋ. ವೆಚ್ಚದಲ್ಲಿ ಬೃಹತ್ ಮಿಲಿಟರಿ  ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಬೆಂಗಳೂರಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ ಸ್ಮರಣೋತ್ಸವದ ಅಂಗವಾಗಿ ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು. ಈ ಮಿಲಿಟರಿ ಶಾಲೆ ಆರಂಭಿಸುವ ಉದ್ದೇಶಕ್ಕಾಗಿ ರೂ. 55 ಕೋ. ಹಣವನ್ನು ಸರಕಾರ ಈಗಾಗಲೇ ಬಿಡುಗಡೆ ಮಾಡಿದೆ.  ಈ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ.  ರಕ್ಷಣಾ ಇಲಾಖೆ […]

ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ- ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ರಿಂದ ಧ್ವಜಾರೋಹಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವವನ್ನು ಸಡಗರ ಮತ್ತು ಸಂಭ್ರಮಗಳಿಂದ ಆಚರಿಸಲಾಯಿತು. ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ ನಾನಾ ಪದಾತಿ ದಳಗಳ ಪಥಸಂಚಲನ ವೀಕ್ಷಿಸಿದರು.  ಅಲ್ಲದೇ, ಗೌರವ ವಂದನೆ ಸ್ವೀಕರಿಸಿದರು.  ಅಲ್ಲದೇ, ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಆರ್. ಅಶೋಕ ಸೇರಿದಂತೆ […]

ಭಾರತ ಇಂದು ಜಗತ್ತಿನಲ್ಲಿಯೇ ಅತ್ಯಂತ ಬಲಿಷ್ಠ, ಪ್ರಭಾವಶಾಲಿ ಗಣತಂತ್ರ ರಾಷ್ಟ್ರ- ಸಚಿವ ಉಮೇಶ ಕತ್ತಿ

ವಿಜಯಪುರ: ಭಾರತ ಇಂದು ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಹಾಗೂ ಪ್ರಭಾವಶಾಲಿ ಗಣತಂತ್ರ ರಾಷ್ಟ್ರವಾಗಿದೆ ಎಂದು ಅರಣ್ಯ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದರುವ ಕ್ರೀಡಾಂಗಣದಲ್ಲಿ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಗಣರಾಜೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಬಸವಾದಿ ಪ್ರಮಥರು ಹಾಗೂ ಕಂಪನಶೀಲ ವೈಚಾರಿಕತೆ ಮತ್ತು ಕ್ರಾಂತಿಕಾರಿ ನಿರ್ಧಾರಗಳ […]

ಬಸವ ಕಲ್ಯಾಣದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪದ ಮಾದರಿಯನ್ನೇ ಮರುಸೃಷ್ಠಿ ಮಾಡಿ- ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಬೀದರ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿರ್ಮಾಣವಾಗಲಿರುವ ಅನುಭವ ಮಂಟಪದಲ್ಲಿ ಬಸವಣ್ಣನ ಕಾಲದ ಅನುಭವ ಮಂಟಪವನ್ನೇ ಮರುಸೃಷ್ಟಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಬಸವ ಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಪ್ರಗತಿ ಕುರಿತು ಅವರು ಸಭೆ ನಡೆಸಿದರು. ಅಲ್ಲದೇ, ಅನುಭವ ಮಂಟಪದ ಪ್ರಾತ್ಯಕ್ಷಿಕೆಯನ್ನು ಸಿಎಂ ವೀಕ್ಷಿಸಿದರು. ಬಸವಣ್ಣನವರ ಕಾಲದಲ್ಲಿ ಅನುಭವ ಮಂಟಪವು ಸದಾ ಚಟುವಟಿಕೆಯಿಂದ ಕೂಡಿದ್ದು, ವಿಚಾರ ಮಂಥನ ನಡೆಯುತ್ತಿತ್ತು.  ಪ್ರಸ್ತುತ ನಿರ್ಮಿಸುತ್ತಿರುವ ಅನುಭವ ಮಂಟಪದಲ್ಲಿಯೂ ನಿರಂತರ […]

ಗುಲ್ಬರ್ಗಾ ವಿವಿ ಪ್ರಥಮ ಸೆಮಿಸ್ಟರ್ ಪಠ್ಯದಲ್ಲಿ ಅಧಿಕಾರಿ ಸೋಮಲಿಂಗ ಗೆಣ್ಣೂರ ರಚಿತ ಕೃತಿಯ ಅಧ್ಯಾಯ ಸೇರ್ಪಡೆ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ರಚಿಸಿರುವ ಅಂಬೇಡ್ಕರ್ ಮಾರ್ಗ ಕೃತಿಯ ಒಂದು ಅಧ್ಯಾಯವನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಥಮ ಸೆಮಿಸ್ಟರ್ ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗುಲ್ಬರ್ಗ ವಿಶ್ವಾವಿದ್ಯಾಲವು ಸೋಮಲಿಂಗ ಗೆಣ್ಣೂರ ಅವರ ಅಂಬೇಡ್ಕರ್ ಮಾರ್ಗ ಕೃತಿಗೆ ಪ್ರಶಸ್ತಿ ನೀಡಿ ಗೌರವಸಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೋಮಲಿಂಗ ಗೆಣ್ಣೂರ, ತಾವು ಇಂಗ್ಲಿಷ್ ಮೀಡಿಯಮ್ ವಿದ್ಯಾರ್ಥಿಯಾಗಿದ್ದರೂ ಕಸ್ತೂರಿ ಕನ್ನಡವನ್ನು ಇಷ್ಟಪಟ್ಟು ಪ್ರೀತಿಯಿಂದ ಕನ್ನಡದ ಸೇವೆ ಮಾಡುತ್ತಿದ್ದೇನೆ.  ಜೀವನದಲ್ಲಿ ಬರುವ ಸವಾಲುಗಳನ್ನು ಹೇಗೆ […]

ಪಂಚಮಸಾಲಿ ಮೂರನೇ ಪೀಠ ಸ್ಥಾಪನೆಯಲ್ಲಿ ಸಚಿವರ ಕುಮ್ಮಕ್ಕಿಲ್ಲ- ಯಾರೂ ಅವರ ನಿರಾಣಿ ಅವರ ಮನಸ್ಸು ನೋಯಿಸಬಾರದು- ಮನಗೂಳಿ ಅಭಿನವ ಸಂಗನಬಸವ ಸ್ವಾಮೀಜಿ

ವಿಜಯಪುರ: ಪಂಚಮಸಾಲಿ ಮೂರನೇ ಪೀಠ ಸ್ಥಾಪನೆಯಲ್ಲಿ ಸಚಿವ ಮುರುಗೇಶ ನಿರಾಣಿ ಕುಮ್ಮಕ್ಕಿಲ್ಲ.  ಯಾರೂ ಅವರ ಹೆಸರು ಹೇಳುವ ಮೂಲಕ ಸಚಿವರ ಮನಸ್ಸನ್ನು ನೋಯಿಸಬಾರದು ಎಂದು ವಿಜಯಪುರ ಜಿಲ್ಲೆಯ ಮನಗೂಳಿ ಹಿರೇಮಠದ ಶ್ರೀ ಸಂಗನಬಸವ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೂರನೇ ಪೀಠದ ಸ್ವಾಮೀಜಿಗಳ ಪೀಠಾರೋಣ ಕಾರ್ಯಕರ್ಮ ಫೆ. 14 ರಂದು ಬ್ರಾಹ್ಮಿ ಮುಹೂರ್ತದಲ್ಲಿ ನಡೆಯಲಿದೆ ಹರಿಹರ ಪೀಠ, ಕನಕ ಪೀಠ, ವಾಲ್ಮಿಕಿ, ಮಾದಾರ ಚನ್ನಯ್ಯ ಪೀಠ, ಭೋವಿ ಪೀಠ, ರೆಡ್ಡಿ ಪೀಠದ ಪೂಜ್ಯರು […]