ಭಾರತದ ಸಂವಿಧಾನ ಸಮಾನತೆಗೆ ಬುನಾದಿಯಾಗಿದೆ- ಎಚ್. ವೈ. ಸಿಂಗೆಗೋಳ

ವಿಜಯಪುರ: ಸಂವಿಧಾನ ಸಮಸಮಾಜದ ಬುನಾದಿಯಾಗಿದ್ದು, ಈ ಕುರಿತು ಜನಜಾಗೃತಿ ಮೂಡಬೇಕಿದೆ ಎಂದು ಸಿಂದಗಿ ಕೃಷಿ ಇಲಾಖೆ ಸಹಾಯಕ ನಿದೇ೯ಶಕ ಎಚ್. ವೈ. ಸಿಂಗೆಗೋಳ ಹೇಳಿದ್ದಾರೆ. ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಮತ್ತು ಹೊನ್ನಳ್ಳಿ ಗ್ರಾಮಗಳಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸ್ವಾಗತಿಸಿ, ಪುಷ್ಪಾಚ೯ನೆ ಮಾಡಿ ಅವರು ಮಾತನಾಡಿದರು. ದೇಶದ ಸವ೯ಧಮ೯, ಜಾತಿ ಜನರ ಹಿತ ಕಾಪಾಡುವ ಅಂಬೇಡ್ಕರ್ ಅವರ ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕಿದೆ.  ಕಾನೂನುಗಳ ಪಾಲನೆ ಬದ್ದತೆ ಬೆಳಸಿಕೊಳ್ಳಬೇಕಿದೆ ಎಂದು ಅವರು ಹೇಳಿದರು. ಈ ಮಧ್ಯೆ ಬ್ರಹ್ಮದೇವರಮಡು […]

ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಭಾವನ ಬೆಳಗೆರೆ ಸಂಪಾದಕತ್ವದಲ್ಲಿ ಶೀಘ್ರದಲ್ಲಿ ಪುನಾರಂಭ

ಬೆಂಗಳೂರು: ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಅತೀ ಶೀಘ್ರದಲ್ಲಿ ಭಾವನಾ ಬೆಳಗೆರೆ ಸಂಪಾದಕತ್ವದಲ್ಲಿ ಪುನಾರಂಭವಾಗಲಿದೆ. ಬೆಂಗಳೂರಿನ ಹಾಯ್ ಬೆಂಗಳೂರು ಪತ್ರಿಕೆ ಕಚೇರಿಯಲ್ಲಿ ಹಿರಿಯ ಪತ್ರಕರ್ತ, ಸಾಹಿತಿ, ಬರಹಗಾರ ರವಿ ಬೆಳೆಗೆರೆ ಅವರ ಎರಡು ಪುಸ್ತಕಗಳಾದ ರಜನೀಶನ ಹುಡುಗಿಯರು, ಅರ್ತಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ರವಿ ಬೆಳಗೆರೆ ಪುತ್ರಿ ಮತ್ತು ಪತ್ರಿಕೆಯ ಸಂಪಾದಕಿಯಾಗಿ ಕಾರ್ಯ ನಿರ್ವಹಿಸಲಿರುವ ಭಾವನಾ ಬೆಳಗೆರೆ ಈ ಘೋಷಣೆ ಮಾಡಿದ್ದಾರೆ. ಹಾಯ್ ಬೆಂಗಳೂರು ಮತ್ತು ಓ ಮನಸೆ ಪತ್ರಿಕೆಗಳನ್ನು ಪುನಾರಂಭಿಸುವಂತೆ ರಾಜ್ಯದ […]

ರಾಷ್ಟ್ರಪಿತನ ತತ್ವಗಳನ್ನು ಪಾಲಿಸಿ ವ್ಯಕ್ತಿತ್ವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು- ಶಂಕರಗೌಡ ಸೋಮನಾಳ

ವಿಜಯಪುರ: ಗಾಂಧೀಜಿಯವರ ತತ್ವಗಳನ್ನು ಪಾಲಿಸಿದರೆ ನಮ್ಮ ವ್ಯಕ್ತಿತ್ವವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದ್ದಾರೆ. ನಗರದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ಗಾಂಧಿ ಅಧ್ಯಯನ ಕೇಂದ್ರ, ಎನ್.ಎಸ್.ಎಸ್ ಕೋಶ ಹಾಗೂ ಐಕ್ಯುಎಸಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ವತಿಯಿಂದ ಗಾಂಧಿ ಸ್ಮಾರಕ ನಿಧಿಯ 75 ನೆಯ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು” ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ […]

ಅಡ್ವಾಣಿಗೆ ಭಾರತರತ್ನ ಸ್ವಾಗತಾರ್ಹ- ಶಿವಕುಮಾರ ಸ್ವಾಮೀಜಿಗೂ ನೀಡಲಿ- ಡಿಕೆಶಿಗೆ ಮುಂದೆ ಸಿಎಂ ಆಗುವ ಅರ್ಹತೆ ಇದೆ- ರಂಭಾಪುರಿ ಶ್ರೀ

ವಿಜಯಪುರ: ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಉಪಪ್ರಧಾನಿ ಎಲ್. ಕೆ. ಆಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ಹಿರಿಯ ನಾಯಕನಿಗೆ ಭಾರತ ರತ್ನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷ ಕಟ್ಟುವಲ್ಲಿ ಲಾಲ ಕೃಷ್ಣ ಅಡ್ವಾಣಿ ಪ್ರಮುಖ ಪಾತ್ರ ವಹಿಸಿದ್ದಾರೆ.  […]

ಬಸವ ನಾಡಿನಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ- ವಚನಗಳ ಮೂಲಕ ಸಮ ಸಮಾಜಕ್ಕೆ ಶರಣರು ಶ್ರಮಿಸಿದ್ದಾರೆ- ಮಹಾದೇವ ಮುರಗಿ

ವಿಜಯಪುರ: ಕಲ್ಯಾಣ ಕರ್ನಾಟಕದ ಬಸವ ಕಲ್ಯಾಣದ ಅನುಭವ ಮಂಟಪದ 12ನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡು ಆದಿಸೆಯಲ್ಲಿ ತಮ್ಮ ವಚನಗಳ ಮೂಲಕ ಪ್ರತಿಪಾದಿಸಿದ ಮಡಿವಾಳ ಮಾಚಿದೇವ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವರ ಮುರಗಿ ಹೇಳಿದರು. ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶರಣರ ಅಂದು ಹಾಕಿಕೊಟ್ಟ ಹಾಗೂ ತಿಳಿಸಿದ ವಿಚಾರಗಳು ಇಂದಿಗೂ […]

ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಜಿಲ್ಲಾಡಳಿತದಿಂದ ಮೌನಾಚರಣೆ ಮೂಲಕ ನಮನ

ವಿಜಯಪುರ: ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನ ಹೋರಾಟ ನಮ್ಮೆಲ್ಲರಿಗೂ ಮಾರ್ಗದರ್ಶನ ಪ್ರತಿದಿನ ಆ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಭಾರತೀಯ ಸೇವಾದಳ, ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಹಾಗೂ ನೆಹರು ಯುವ ಕೇಂದ್ರ ಇವರ ಸಹಯೋಗದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಹುತಾತ್ಮರ (ಮೀನಾಕ್ಷಿ ಚೌಕ್) ವೃತ್ತದಲ್ಲಿರುವ ಸ್ಮಾರಕಕ್ಕೆ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ […]

ಬಂಜಾರಾ ಕಸೂತಿ ಕಲೆ ಉತ್ತೇಜನಕ್ಕಾಗಿ ತರಬೇತಿ ಶಿಬಿರ ಆಯೋಜನೆ- ಆಶಾ ಎಂ. ಪಾಟೀಲ

ವಿಜಯಪುರ: ಬಂಜಾರಾ ಕಸೂತಿ ಕಲೆಯನ್ನು ಪ್ರೋತ್ಸಾಹಿಸಲು ಬಂಜಾರಾ ಕಸೂತಿ ಕಸೂತಿ ಸಂಸ್ಥೆ ಸ್ಥಾಪಿಸಿ ತರಬೇತಿ ಶಿಬಿರಗಳ ಆಯೋಜನೆ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ.ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಮಹಿಳಾ ಸಬಲೀಕರಣ ಘಟಕ ಮತ್ತು ಬಂಜಾರಾ ಕಸೂತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ವಾರದ ಬಂಜಾರಾ ಕಸೂತಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದ ಸಾಂಸ್ಕøತಿಕ ವೆಶಿಷ್ಟ್ಯತೆಯ ಸಂಕೇತವಾಗಿರುವ ಬಂಜಾರಾ ಕಸೂತಿ ಗ್ರಾಮೀಣ ಕರಕುಶಲ […]

ಓಐಡಿವೈಓ ವತಿಯಿಂದ ನೇತಾಜಿ ಸುಭಾಸಚಂದ್ರ ಬೋಸ ಅವರ 127ನೇ ಜನ್ಮದಿನಾಚರಣೆ

ವಿಜಯಪುರ: ಎಐಡಿವೈಓ ವತಿಯಿಂದ ನಗರದ ಹುತಾತ್ಮ ಸರ್ಕಲ್ ಮತ್ತು ಸರಕಾರಿ ಐಟಿಐ ಕಾಲೇಜ್‌ನಲ್ಲಿ ಎಐಡಿವೈಒ ಸಂಘಟನೆಯ ನೇತೃತ್ವದಲ್ಲಿ ನೇತಾಜಿ ಸುಭಾಸಚಂದ್ರ ಬೋಸ್‌ರವರ 127ನೇ ಜನ್ಮದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ಇಂದಿನ ಯುವಜನರಿಗೆ ನೇತಾಜಿಯವರ ಜೀವನ ಚರಿತ್ರೆ ಆದರ್ಶವಾಗಿರಬೇಕು.  ನೇತಾಜಿಯವರು ಜೀವನದುದ್ದಕ್ಕೂ ಸಂಧಾನತೀತವಾಗಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದರು.  ಎರಡು ಬಾರಿ ಕಾಂಗ್ರೆಸ್ ಸಮ್ಮೇಳನದ ಅಧ್ಯಕ್ಷರಾಗಿ ಪೂರ್ಣ ಸ್ವರಾಜ್ಯದ ಬಗ್ಗೆ ಹಾಗೂ ಕಾರ್ಮಿಕ ವರ್ಗ ಅಧಿಕಾರಕ್ಕೆ ಬರಬೇಕು ಎಂದು ಸ್ಪಷ್ಟವಾದ […]

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನಲ್ಲಿ ರಾಮ ಮಂದಿರ ಲೋಕಾರ್ಪಣೆ ಅಂಗವಾಗಿ ಶ್ರೀರಾಮನಿಗೆ ಪೂಜೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯ ಅಂಗವಾಗಿ ನಗರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ, ನೂರಾರು ವರ್ಷಗಳ ಹಿಂದೆ ಆಗಬೇಕಾಗಿದ್ದ ಶ್ರೀರಾಮ ಮಂದಿರವನ್ನು ಈಗ ಪೂರ್ಣಗೊಳಿಸಿ ಉದ್ಗಾಟಿಸಿರುವುದು ಸಂತಸ ತಂದಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷೆ ಸೌಭಾಗ್ಯ ಎಸ್. ಭೋಗಶೆಟ್ಟಿ, ನಿರ್ದೇಶಕರಾದ ಶಾಂತಪ್ಪ ಎಸ್. ಜತ್ತಿ,  ಪ್ರಕಾಶ ಬಗಲಿ, ಗುರುರಾಜ ಗಂಗನಳ್ಳಿ, ಈರಣ್ಣ ಪಟ್ಟಣಶೆಟ್ಟಿ, ಡಾ. […]

ಬಬಲೇಶ್ವರ ಮತಕ್ಷೇತ್ರಾದ್ಯಂತ ನಾನಾ ದೇವಸ್ಥಾನಗಳಲ್ಲಿ ಎಂಬಿಪಿ ಅಭಿಮಾನಿಗಳ ಬಳಗದಿಂದ ವಿಶೇಷ ಪೂಜೆ

ವಿಜಯಪುರ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಸರಕಾರದ ಸುತ್ತೋಲೆಯಂತೆ ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳಲ್ಲಿ ರಾಮ- ಹನುಮಂತದೇವರ ಗುಡಿಗಳು ಹಾಗೂ ಗ್ರಾಮದೇವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ- ಪ್ರಾರ್ಥನೆ ನೆರವೇರಿಸಲಾಯಿತು. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಎಂಬಿಪಿ ಅಭಿಮಾನಿಗಳಿಂದ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತುಅದೇ ರೀತಿ ಶ್ರೀ ಎಂ. ಬಿ. ಪಾಟೀಲ ಅವರ ಅಭಿಮಾನಿಗಳ ಬಳಗದವರು ಕೂಡಾ ಬಬಲೇಶ್ವರ ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ರಾಮ, ಹನುಮಂತ ಮತ್ತು […]