ದುಬೈನಲ್ಲಿ ಜೈ ಶ್ರೀರಾಮ ಎಂದು ಸಂಭ್ರಮಿಸಿದ ಬಸವನಾಡಿನ ಪ್ರವಾಸಿಗರು

ವಿಜಯಪುರ: ಈಗ ದೇಶಾದ್ಯಂತ ಶ್ರೀರಾಮ ಮಂದಿರದಲ್ಲಿ ಶ್ರೀರಾಮಚಂದ್ರನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆ ಸಂಚಲನ ಸೃಷ್ಠಿಸಿದೆ.  ಎಲ್ಲೆಡೆ ಜೈ ಶ್ರೀರಾಮ ಘೋಷಣೆಗಳು ಮೊಳಗುತ್ತಿದ್ದರೆ, ಎಲ್ಲ ಕಡೆ ರಾಮಭಕ್ತರು ನಾನಾ ರೀತಿಯಲ್ಲಿ ಸಾಂಸ್ಕೃತಿ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಇದೇ ರೀತಿ, ದುಬೈ ಪ್ರವಾಸದಲ್ಲಿರುವ ಬಸವನಾಡು ವಿಜಯಪುರ ಜಿಲ್ಲೆಯ ಹಲವಾರು ಜನರು ತಾವೀಗ ಪ್ರವಾಸ ಕೈಗೊಂಡಿರುವ  ಸ್ಖಳದಲ್ಲಿಯೇ ಕೈಯ್ಯಲ್ಲಿ ಭಗವಾ ಧ್ವಜ ಹಿಡಿದು ರಾಮ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ.  ವಿಜಯಪುರ […]

ವಿಜಯಪುರ ಆದರ್ಶ ನಗರದ ಮಾರುತಿ ಮಂದಿರದಲ್ಲಿ ಶ್ರೀರಾಮನಿಗೆ ಪೂಜೆ

ವಿಜಯಪುರ: ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ನಗರದ ಆದರ್ಶ ನಗರದ ಶ್ರೀ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು. ದೇವಸ್ಥಾನದಲ್ಲಿ ಸೇರಿದ ಬಡಾವಣೆಯ ನಿವಾಸಿಗಳು ಶ್ರೀರಾಮಚಂದ್ರನ ಬೃಹತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಮನಾಮ ಜಪಿಸಿದರು.  ಅಲ್ಲದೇ, ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ ಮತ್ತು ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು.  ಅಲ್ಲದೇ, ಪ್ರಸಾದ ಹಂಚಿ ಖುಷಿಪಟ್ಟರು. ಈ ಸಂದರ್ಭದಲ್ಲಿ ಶ್ರೀ ಹನುಮಾನ ದೇವಸ್ಥಾನ ಅಧ್ಶಕ್ಷ […]

ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ- ಬಸವ ನಾಡಿನಲ್ಲಿ ಝಗಮಗಿಸುತ್ತಿರುವ ರಸ್ತೆಗಳು, ದೇವಸ್ಥಾನಗಳು

ವಿಜಯಪುರ: ಬಹು ನಿರೀಕ್ಷಿತ ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಬಸವನಾಡು ವಿಜಯಪುರ ಜಿಲ್ಲೆಯಲ್ಲಿಯೂ ಸಂಭ್ರಮದ ವಾತಾವರಣ ಮನೆ ಮಾಡಿದೆ. ಜನೇವರಿ 22 ರಂದು ಸೋಮವಾರ ಗುಮ್ಮಟ ನಗರಿ ವಿಜಯಪುರದಲ್ಲಿ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರಗಳು ಕಣ್ಮನ ಸೆಳೆಯುತ್ತಿವೆ.  ನಗರ ಕಲರ್‌ಪುಲ್ ಲೈಟಿಂಗ್ ಮೂಲಕ ಜಗಮಗಿಸುತ್ತಿದೆ. ನಗರದ ಶಿವಾಜಿ ವೃತ್ತದಲ್ಲಿ‌ ಕೇಸರಿ ಬಾವುಟಗಳನ್ನು‌ ಕಟ್ಟಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ.  ಗಾಂಧಿಚೌಕ್, ಬಸವೇಶ್ವರ ಚೌಕ್ ಮತ್ತು ಅಂಬೇಡ್ಕರ್ ಚೌಕ್ ಗಳಲ್ಲಿಯೂ ವಿದ್ಯುತ್ ದೀಪಾಲಂಕಾರ […]

ಅಂಬಿಗರ ಚೌಡಯ್ಯ ಶ್ರೇಷ್ಠ ತತ್ವಜ್ಞಾನಿ, ವಚನಕಾರರು- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಬಸವಾದಿ ಶರಣರ ಸಮಕಾಲಿನ ಶರಣರಾದ ಅಂಬಿಗರ ಚೌಡಯ್ಯನವರು ಅಂದಿನ ಸಮಾಜದಲ್ಲಿನ ಮೌಢ್ಯಗಳ ನಿರ್ಮೂಲನೆಗಾಗಿ ಶ್ರಮಿಸಿದವರು. ಮಹಿಳೆಯರು ಮತ್ತು ಪುರುಷ ಸಮಾನರೆಂದು ಪ್ರತಿಪಾದಿಸಿದ ತತ್ವನಿಷ್ಟ ಶ್ರೇಷ್ಟ ತತ್ವಜ್ಞಾನಿ, ವಚನಕಾರರಾಗಿದ್ದರು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಾಯಕ ದಾಸೋಹ,ಶಿವಯೋಗ ಸಾಧನೆಯ ಮೂಲಕ […]

1857ರ ಸ್ವಾತಂತ್ರ್ಯ ಸಂಗ್ರಾಮ ರಾಷ್ಟ್ರೀಯತೆ ಬೆಳೆಯಲು ಕಾರಣ- ಶಂಕರಗೌಡ ಸೋಮನಾಳ

ವಿಜಯಪುರ: 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವು ರಾಷ್ಟ್ರೀಯತೆ ಬೆಳೆಯಲು ಹಾಗೂ ಸ್ವಾತಂತ್ರ್ಯ ಚಳವಳಿಯಿಂದ ಭಾರತೀಯ ಜನರಲ್ಲಿ ರಾಷ್ಟ್ರೀಯತೆಯ ಮನೋಭಾವ ಬರಲು ಕಾರಣವಾಯಿತು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಐಕ್ಯೂಎಸಿ ಸಹಯೋಗದೊಂದಿಗೆ ಇತಿಹಾಸ ವಿಭಾಗದಲ್ಲಿ ಜರುಗಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಅಮೋಘವಾಗಿದ್ದು, 1857ರ ಪ್ರಥಮ ಸ್ವಾತಂತ್ರö್ಯ ಸಂಗ್ರಾಮವು ಪ್ರೇರಣೆಯಾಗಿದೆ. ವಿದ್ಯಾರ್ಥಿಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಯ ದೃಷ್ಟಿಕೋನದಿಂದಲೂ ಆಧುನಿಕ ಭಾರತದ […]

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ: ಸರಕಾರದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಂಗಮೇಶ ಬಬಲೇಶ್ವರ

ವಿಜಯಪುರ: 12ನೇ ಶತಮಾನದ ಸಮಾಜ ಸುಧಾರಕ, ವಿಶ್ವದ ಪ್ರಥಮ ಪ್ರಜಾಪ್ರಭುತ್ವ ಸ್ಥಾಪಕ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರಕಾರ ಘೋಷಣೆ ಮಾಡಿರುವುದಕ್ಕೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಕೃತಜ್ಞತೆ ಸಲ್ಲಿಸಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರಕಾರ ಐತಿಹಾಸಿಕ ತೀರ್ಮಾನ ಮಾಡಿದೆ.  ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, ಸಚಿವರಾದ ಶರಣ ಎಂ. ಬಿ. ಪಾಟೀಲ, ರಾಜ್ಯ ಸಚಿವ ಸಂಪುಟದ ಎಲ್ಲ […]

ನಾಗರಾಳೆ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ- ಎಡಿಸಿ ಮಹಾದೇವ ಮುರಗಿ

ವಿಜಯಪುರ: ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ.  ಇಂಥ ಪರಿಸ್ಥಿತಿಯಲ್ಲಿ ನಾಗರಾಳೆ ಪಬ್ಲಿಕ್ ಸ್ಕೂಲ್ ಕಳೆದ 23 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುತ್ತ ಮುಂಚೂಣಿಯಲ್ಲಿರುವುದು ಶ್ಲಾಘನೀಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು. ನಗರದ ಗಚ್ಚಿನಕಟ್ಟಿ ಕಾಲನಿಯಲ್ಲಿರುವ ನಾಗರಾಳೆ ಪಬ್ಲಿಕ್ ಶಾಲೆಯ 23ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಲೆಯ ವಿದ್ಯಾರ್ಥಿಗಳ ಬಗ್ಗೆ ಪ್ರತಿ ತಿಂಗಳು ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ.  […]

ಅನುಭಾವಿ ಕವಿ ಫಾರೂಖಿ ಅವರ ಕವನ ಸಂಕಲನ ಬಿಡುಗಡೆ

ವಿಜಯಪುರ: ವಿಜಯಪುರದ ಇತಿಹಾಸದಲ್ಲಿ ಅಚ್ಬಳಿಯದ ನೆನಪು ಉಳಿಸಿದ ಬ್ರಿಟಿಷ್ ವಾಯುದಳ (ಆರ್‌ಎಎಫ್)ದ ಅಧಿಕಾರಿಯಾಗಿದ್ದ ದಿ. ಅನ್ವರ ಹುಸೇನ ಫಾರೂಖಿ ಅವರ ಅಪ್ರಕಟಿತ ಇಂಗ್ಲೀಷ ಕವನಗಳ ಸಂಗ್ರಹ ವಾಯ್ಸ್ ಫ್ರಾಮ್ ಹೆವನ್ ಬಿಡುಡಗೆ ಸಮಾರಂಭ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಖ್ಯಾತ ಕವಿ, ಲೇಖಕ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕವಿ ಡಾ. ಮಾಹಿರ್ ಮನ್ಸೂರ್, ದಿ. ಅನ್ವರ್ ಹುಸೇನ್ ಫಾರೂಖಿ ಅವರ ಕವಿತೆಗಳಲ್ಲಿ ಶರಣರ, ಸರ್ವಜ್ಞನ ಅನುಭವ ಹಾಗೂ […]

ಗಾಳಿಪಟ ಹಾರಿಸುವುದು ಒಂದು ವಿಶಿಷ್ಟ ಕಲೆ- ದೈಹಿಕ ನಿರ್ದೇಶಕ ಪ್ರೊ. ಎಸ್. ಎ. ಪಾಟೀಲ

ವಿಜಯಪುರ: ಗಾಳಿಪಟ ಹಾರಿಸುವುದು ಒಂದು ವಿಶೇಷ ಕಲೆಯಾಗಿದೆ.  ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ಇದು ರೂಢಿಗತವಾಗಿ ಬಂದಿದೆ ಎಂದು ದೈಹಿಕ ನಿರ್ದೇಶಕ ಪ್ರೊ. ಎಸ್. ಎ. ಪಾಟೀಲ ಹೇಳಿದ್ದಾರೆ. ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ಸಂಕ್ರಾಂತಿ ಹಬ್ಬದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿ್ದ ಕೈಟ ಫೆಸ್ಟ್(ಗಾಳಿಪಟ ಉತ್ಸವ) ಉದ್ಘಾಟಿಸಿ ಅವರು ಮಾತನಾಡಿದರು. ಗಾಳಿಪಟ ತಯಾರಿಸಲು ಕೌಶಲ್ಯ ಅಗತ್ಯವಾಗಿದೆ.  ಪತಂಗ ಹಾರಿಸುವುದು ಮನರಂಜನೆ ಜೊತೆಗೆ ಅದರ ವೃತ್ತಿಪರತೆಯನ್ನು ಹೆಚ್ಚಿಸುತ್ತದೆ.  ಆದರೆ, […]

ವಿ. ಭ. ದರಬಾರ ಪಿಯು ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ, ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ವಿಜಯಪುರ: ನಗರದ ವಿ. ಭ. ದರಬಾರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಪರಾಧ ವಿಭಾಗದ ಹೆಚ್ಚುವರಿ ಎಸ್ಪಿ ರಾಮನಗೌಡ ಎ. ಹಟ್ಟಿ ಮಾತನಾಡಿ, ಬಡವನಾಗಿ ಜನಿಸಿದರೂ ಬಡವನಾಗಿಯೇ ಸಾಯುವುದು ತಪ್ಪು.  ಜೀವನದಲ್ಲಿ ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಪೂರಕವಾದ ಕೆಲಸಗಳನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿ ಬದುಕು ಸಾಗಿಸಬೇಕು ಎಂದು ಹೇಳಿದರು. ಶಾಲಾ ಶಿಕ್ಷಣ ಇಲಾಖೆ […]