ಶ್ರೀ ಗೋಪಾಲ ನಂದುಲಾಲ ಮಹಾರಾಜರಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ-ಸಂತಸ ವ್ಯಕ್ತಪಡಿಸಿದ ಮಹಾರಾಜರು

ವಿಜಯಪುರ: ಅಯೋಧ್ಯೆಯಲ್ಲಿ ಜನೇವರಿ 22 ರಂದು ನಡೆಯಲಿರುವ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ವಿಜಯಪುರ ಜಿಲ್ಲೆಯಿಂದ ಶ್ರೀ ಗೋಪಾಲ ನಂದುಲಾಲ ಮಹಾರಾಜ ಅವರನ್ನು ಆಹ್ವಾಸಲಾಗಿದೆ. ಈ ಕುರಿತು ಸಂತಸ ವ್ಯಕ್ತಪಡಿಸಿರುವ ಮಹಾರಾಜರು, ತಮಗೆ ಆಹ್ವಾನ ನೀಡಿರುವುದು ಬಂಜಾರಾ ಸಮಾಜಕ್ಕೂ ಪ್ರಾತಿನಿಧ್ಯ ನೀಡಿದಂತಾಗಿದ್ದು, ಇದು ಖುಷಿಯ ಸಂಗತಿಯಾಗಿದೆ.  ರಾಮ ಮಂದಿರದ ಟ್ರಸ್ಟ್ ಸಮಿತಿಯವರಿಗೆ ಗೌರವಪೂರ್ವಕವಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿಎಲ್. ಟಿ- 1ರಿಂದ ಅಯೋಧ್ಯೆಗೆ ಹೋಗುತ್ತಿರುವುದು ನನ್ನ ಸೌಭಾಗ್ಯ.  ಸಂತ ಸೇವಾಲಾಲ ಮಹಾರಾಜರ […]

ವಿಜಯಪುರದಲ್ಲಿ ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

ವಿಜಯಪುರ: ಸಮ ಸಮಾಜದ ಕನಸು ಹೊತ್ತು,ಆ ಮೂಲಕ ಸತ್ಯಪಥದಲ್ಲಿ ನಡೆದು, ತಮ್ಮ ವಚನಗಳ ಮೂಲಕ ಸಾಮಾನ್ಯರಿಗೂ ತಿಳಿಯುವಂತೆ ಬರೆದಂತೆ,ನುಡಿದಂತೆ ನಡೆದು ಜನಸಾಮಾನ್ಯರಿಗೆ ಅರಿವಿನ ಗುರುವಾಗಿದ್ದವರು 12ನೇ ಶತಮಾನದ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದ್ದಾರೆ.  ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿ ಅವರು ಮಾತನಾಡಿದರು. ಶಿವಯೋಗಿ […]

ಬಸವ ನಾಡಿನ ರಾಮಭಕ್ತರ ಭಕ್ತಿ- ಬ್ಯಾಂಕಾಕ್ ಬಳಿ 13 ಸಾವಿರ ಅಡಿ ಸ್ಕೈ ಡೈವಿಂಗ್ ಮೂಲಕ ಧುಮುಕಿ ದೈವಭಕ್ತಿ ಸಮರ್ಪಣೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಭಕ್ತರು ತರಹೇವಾರಿಯಾಗಿ ತಂತಮ್ಮ ಭಕ್ತಿಯ ಪರಾಕಾಷ್ಟೆ ತೋರಿಸುತ್ತಿದ್ದಾರೆ. ಕೆಲವು ಭಕ್ತರು ಪಾದಯಾತ್ರೆ ಮೂಲಕ ಅಯೋಧ್ಯೆಗೆ ತೆರಳುತ್ತಿದ್ದರೆ, ಮತ್ತೆ ಹಲವರು ತಮ್ಮ ಕೈಲಾದ ಉಡುಗೊರೆಗಳನ್ನು ಕಳುಹಿಸಿಕೊಟ್ಟಿದ್ದಾರೆ.  ಗುಜರಾತಿನಿಂದ ಅತೀ ಉದ್ದವಾದ ಊದಿನ ಕಡ್ಡಿಯನ್ನು ಕಳುಹಿಸಿ ಕೊಟ್ಟಿದ್ದರೆ, ಮತ್ತೋಬ್ಬರು ಚಿನ್ನದ ಪಾದುಕೆಗಳನ್ನು ಕಳುಹಿಸಿದ್ದಾರೆ.  ಮತ್ತೆ ಹಲವರು ವಸ್ತ್ರಗಳು, ಸುಗಂಧ ದ್ರವ್ಯಗಳು, ಬಟ್ಟೆಗಳು, ಪೂಜಾ ಸಾಮಗ್ರಿಗಳು, ತರಹೇವಾರಿ ಖಾದ್ಯಗಳು, ಪಾತ್ರೆಗಳು, ಗಂಟೆಗಳನ್ನು ಭಕ್ತಿ ಸಮರ್ಪಣೆ ಮಾಡಿದ್ದಾರೆ. ಮತ್ತೆ […]

ಶ್ರೀ ಶಿವದಾಸಿಮಯ್ಯ ಜಯಂತಿ, ಪ್ರತಿಭಾ ಪುರಸ್ಕಾರ, ದಾನಿಗಳ ಸನ್ಮಾನ ಕಾರ್ಯಕ್ರಮಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಚಾಲನೆ

ವಿಜಯಪುರ: ನಗರದಲ್ಲಿ ನಡೆದ ಶ್ರೀ ಶಿವದಾಸಿಮಯ್ಯ ಜಯಂತಿ, ಪ್ರತಿಭಾ ಪುರಸ್ಕಾರ, ದಾನಿಗಳ ಸನ್ಮಾನ ಕಾರ್ಯಕ್ರಮಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಮಾಜ ಪ್ರಗತಿಯತ್ತ ಸಾಗಲು ಆಡಳಿತ ಮಂಡಳಿಯ ಪ್ರಾಮಾಣಿಕ, ಕ್ರಿಯಾಶೀಲತೆ ಹಾಗೂ ಉತ್ತಮ ಹಿನ್ನೆಲೆ ಕಾರಣ.  ಆಡಳಿತ ಮಂಡಳಿ ಉತ್ತಮವಾಗಿದ್ದರೆ ಸಮಾಜದಿಂದ ಮತ್ತು ಜನ ಪ್ರತಿನಿಧಿಗಳಿಂದ  ದೇಣಿಗೆ ಸಹಾಯ ಸಹಕಾರ ದೊರೆಯುತ್ತದೆ ಎಂದು ಹೇಳಿದರು. ಸಮಾಜದಲ್ಲಿರುವ ಎಲ್ಲ ಜನರು ತಮ್ಮ ದುಡಿಮೆಯ ಸ್ವಲ್ಪ ಭಾಗವನ್ನು ಸಮಾಜದ ಅಭಿವೃದ್ಧಿಗೆ ಮೀಸಲಾಗಿಡಬೇಕು.  ನಾನೂ […]

ರಾಮ ಮಂದಿರ ಉದ್ಘಾಟನೆ ಬಳಿಕ ವಿಶ್ವದಲ್ಲಿ ಹಿಂದುಯುಗ ಪ್ರಾರಂಭವಾಗಲಿದೆ- ಕಾಂಗ್ರೆಸ್ ಕೌರವರು, ರಾವಣನ ಪಾತ್ರ ವಹಿಸುತ್ತಿದೆ- ಶಾಸಕ ಯತ್ನಾಳ ವಾಗ್ದಾಳಿ

ವಿಜಯಪುರ: ರಾಮ ಮಂದಿರ ಉದ್ಘಾಟನೆ ಬಳಿಕ ಜಗತ್ತಿನಲ್ಲಿ ಹಿಂದುಯುಗ ಪ್ರಾರಂಭವಾಗಲಿದೆ.  ವಿಶ್ವ ಹಿಂದೂಮಯವಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಹೋಗದಿರುವ ಕ್ರಮವನ್ನು ಅವರು ಕಟುವಾಗಿ ಟೀಕಿಸಿದರು. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರದಲ್ಲಿ ಶಂಕರಾಚಾರ್ಯ ಪೀಠಗಳ ವಿರೋಧ ವಿಚಾರ ಅವರವರಿಗೆ ಬಿಟ್ಟದ್ದು. ಒಂದು ತಿಳಿದುಕೊಳ್ಳಿ.  ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಬಳಿಕ ದೇಶದಲ್ಲಿ ಹೊಸ ಹಿಂದೂ ಯುಗ […]

ವಿಜಯಪುರ ನಗರದ ಶ್ರೀ ಶಿವಾಜಿ ಮಹಾರಾಜ ಸೊಸಾಯಿಟಿಯಲ್ಲಿ ರಾಜಮಾತಾ ಜೀಜಾವು, ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ವಿಜಯಪುರ: ನಗರದ ಶ್ರೀ ಶಿವಾಜಿ ಮಹಾರಾಜ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಯಲ್ಲಿ ರಾಜಮಾತಾ ಜೀಜಾವು ಮತ್ತು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಪ್ರಾಧಾಪ್ಯಕ ಡಾ. ಸದಾಶಿವ ಪವಾರ, ರಾಜಮಾತಾ ಜೀಜಾವು ಹಿಂದವಿ ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರಿಗೆ ಬಾಲ್ಯದಿಂದಲೂ ಯುದ್ಧ ಕೌಶಲ್ಯಗಳು ಮತ್ತು ಹಿಂದು ಧರ್ಮದ ರಕ್ಷಣೆಯ ಕುರಿತು ನೀತಿ ಪಾಠಗಳನ್ನು ಹೇಳುತ್ತಿದ್ದರು.  ಅವರ ಪಾಠಗಳ ಪ್ರೇರಣೆಯಿಂದಲೇ ಛತ್ರಪತಿ ಶಿವಾಜಿ ಮಹಾರಾಜರು ಹಿಂದು ಧರ್ಮಕ್ಕಾಗಿ ಶ್ರಮಿಸಿದರು ಎಂದು ಹೇಳಿದರು. ಸ್ವಾಮಿ ವಿವೇಕಾನಂದರು […]

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದೇ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು ಜವಾಬ್ದಾರಿಯಿಂದ […]

ಅಥಣಿ ಶ್ರೀ ಮೋಟಗಿಮಠದ ಬಸವಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಎಂ. ಎಸ್. ಮದಭಾವಿಗೆ ಅಭಿನಂದನೆಗಳ ಮಹಾಪೂರ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಡಾ. ಎಂ. ಎಸ್. ಮದಭಾವಿ ಅವರಿಗೆ ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿಮಠ ಈ ವರ್ಷದ ಬಸವಭೂಷಣ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ.   ಉತ್ತರ ಕರ್ನಾಟಕದ ಗಡಿಯಲ್ಲಿರುವ ಶ್ರೀ ಮೋಟಗಿಮಠವು ಶತಮಾನಗಳಿಂದ ನಾಡು, ನುಡಿ, ಸಂಸ್ಕೃತಿ ಸಂವರ್ಧನೆಗಾಗಿ ಶ್ರಮಿಸುತ್ತ ಬಂದಿದೆ.  ಪ್ರತಿವರ್ಷ ಶರಣಸಂಸ್ಕೃತಿ ಗಡಿನಾಡ ನುಡಿಹಬ್ಬ ಆಚರಿಸುವ ಈ ಮಠ ಗಡಿಯಲ್ಲಿ ಕನ್ನಡದ ಏಳಿಗೆಗಾಗಿ ಶ್ರಮಿಸುತ್ತಿದೆ.  ಭಾಷಾ ಭಾವೈಕ್ಯತೆ, ಧರ್ಮ, […]

ತ್ಯಾಗವೀರ, ಜ್ಞಾನದಾಸೋಹಿ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಸಮಾಜಮುಖಿ ಕಾರ್ಯಗಳಿಗಾಗಿ ಸರ್ವಸ್ವ ತ್ಯಾಗ ಮಾಡಿದ್ದಾರೆ- ಡಾ. ಅಭಿನವ ಸಿದ್ಧರಾಮೇಶ್ವರ ಸ್ವಾಮೀಜಿ

ವಿಜಯಪುರ: ತ್ಯಾಗವೀರ, ಜ್ಞಾನ ದಾಸೋಹಿ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರು ಸಮಾಜಮುಖಿ ಕೆಲಸಗಳಿಗಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ ಎಂದು ಕವಲಗಿ ಕೂಡವಕ್ಕಲಿಗ ಮಠದ ಡಾ. ಅಭಿನವ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರ 163ನೇ ಜಯಂತಿ ಮತ್ತು ಶ್ರೀ ಸಿರಸಂಗಿ ಲಿಂಗರಾಜ ವೃತ್ತ ಉದ್ಗಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರು ಅಂದಿನ ಕಾಲದಲ್ಲಿ ರಾಜ್ಯದಲ್ಲಿ […]

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ, ರಾಯಭಾರಿಯಾಗಿ ಘೋಷಿಸಲು ಸ್ವಾಮೀಜಿ, ಚಿಂತಕರ ಮನವಿ- ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನ- ಸಿದ್ದರಾಮಯ್ಯ

ಬೆಂಗಳೂರು:  ಅಣ್ಣ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿ ಘೋಷಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ.  ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ.  ಆದರೆ, ಈ ಕುರಿತು ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, […]