ಸಾಲ ತೀರಿಸಲು, ಆರ್ಮಿ, ಪಿ ಎಸ್ ಐ ಪರೀಕ್ಷೆ ಪಾಸು ಮಾಡು, ಬೂಂದಿ ಲಾಡು ಅರ್ಪಿಸುವೆ- ಹನುಮಂತನ ಹುಂಡಿಯಲ್ಲಿ ಭಕ್ತರ ವಿಶಿಷ್ಠ ಬೇಡಿಕೆಗಳ ಚೀಟಿಗಳು

ವಿಜಯಪುರ: ನಾನು ಮಾಡಿದ ಸಾಲ ತೀರಿಸಲು ಪರಿಹಾರಕ್ಕೆ ದಾರಿ ತೋರಿಸು ಯಲಗೂರ ಹನಮಂತಪ್ಪ.  ಆರ್ಮಿ ರನ್ನಿಂಗ ಇವತ್ತು ಸ್ಟಾರ್ಟ್ ಮಾಡೀನಿ ದೇವರೆ.  ಪಾಸ ಮಾಡು.  ಅತೀ ವೇಗ ಓಡುವಂಗ ಮಾಡು.  ಆರೋಗ್ಯವಾಗಿ ಇಡು ದೇವರೆ.  ಗೋರ್ನಮೆಂಟ್ ಜಾಬ್ ಪಿ. ಎಸ್. ಐ ಮಾಡು.  ಹೆಂಡತಿ ಮಕ್ಕಳ ನಡುವೆ ಜಗಳವಾಗದಂತಿರಿಸು.  ಮಗನಿಗೆ ಎಂಬಿಎ ಸೀಟ್ ಸಿಗಲಿ.  ಮತ್ತೆ ಬಂದು ನಿನ್ನ ದರ್ಶನ ಮಾಡುತ್ತೇನೆ.  ನೌಕರಿ ಅವಶ್ಯಕತೆ ತುಂಬಾ ಇದೆ. ಬೇಗನೇ ಒಳ್ಳೆಯ ಕಂಪನಿಯಲ್ಲಿ ಹೆಚ್ಚಿನ ಸಂಬಳದ ನೌಕರಿ ಸಿಕ್ಕು […]

Krishna Puje: ಉತ್ತರ ಕರ್ನಾಟಕದ ಜೀವನಾಡಿ- ಕೃಷ್ಣಾ ಸೇರಿ ಪಂಚ ನದಿಗಳ ಉಗಮಸ್ಥಾನ ಮಹಾಬಳೇಶ್ವರದಲ್ಲಿ ಪೂಜೆ ಸಲ್ಲಿಸಿದ ಬಸವ ನಾಡಿನ ರೈತರು

ಮಹೇಶ ವಿ. ಶಟಗಾರ ವಿಜಯಪುರ: ಕೃಷ್ಣಾ ಉತ್ತರ ಕರ್ನಾಟಕದ ಜೀವನದಿ.  ಉತ್ತರ ಕರ್ನಾಟಕದಲ್ಲಿ ಮಳೆಯಾಗದಿದ್ದರೂ ಈ ನದಿ ರೈತರು, ಜನಜಾನುವಾರುಗಳಿಗೆ ಪ್ರತಿವರ್ಷ ನೀರೊದಗಿಸುತ್ತದೆ.  ಈ ಬಾರಿಯೂ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಅಷ್ಟಕ್ಕಷ್ಟೆಯಾಗಿದ್ದರೂ, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.  ಹೀಗಾಗಿ ತಮಗೆ ಜೀವಜಲ ನೀಡುವ ಕೃಷ್ಣಾ ನದಿಯ ಉಗಮಸ್ಥಾನ ಮಹಾರಾಷ್ಟ್ರದಲ್ಲಿ ಮಹಾಬಳೇಶ್ವರ ಪಂಚಗಂಗಾ ದೇವಸ್ಥಾನಕ್ಕೆ ತೆರಳಿದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಅನ್ನತಾದರು ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ […]

AP Govt Shrishail: ಆಂಧ್ರ ಪ್ರದೇಶ ಸರಕಾರ ದಿಂದ ಶ್ರೀಶೈಲಕ್ಕೆ ಪೀಠಕ್ಕೆ 10 ಎಕರೆ ಜಮೀನು ಮಂಜೂರು- ಡಾ. ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ

ವಿಜಯಪುರ: ಆಂಧ್ರ ಪ್ರದೇಶ ಸರಕಾರ ಶ್ರೀಶೈಲ ಪೀಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿದೆ. ಅದರಲ್ಲಿ ಐದು ಎಕರೆ ಸ್ಥಳವನ್ನು ದೇವಾಸ್ಥಾನಕ್ಕೆ ಒಪ್ಪಿಸಿದೆ. ಇನ್ನುಳಿದ ಐದು ಎಕರೆ ಜಾಗದಲ್ಲಿ 100 ಬೆಡ್ ಸುಸಜ್ಜಿತ ಆಸ್ಪತ್ರೆ, ಪಾದಯಾತ್ರಿಕರಿಗೆ 500 ಕೋಣೆಗಳ ಯಾತ್ರಿ ನಿವಾಸ, 5000 ಕಂಬಗಳ ಮಂಟಪ ನಿರ್ಮಾಣ, ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಶ್ರೀಶೈಲ […]

Governor Vachana Shila Mantap: ಬಸವ ನಾಡಿನಲ್ಲಿ ವಚನ ಶಿಲಾ ಮಂಟಪ ಲೋಕಾರ್ಪಣೆ ಮಾಡಿದ ರಾಜ್ಯಪಾಲ ಥಾವರ ಚಂದ ಗೆಲ್ಹೋಟ್

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಿರ್ಮಿಸಲಾಗಿರುವ ವಚನ ಶಿಲಾ ಮಂಟಪವನ್ನು ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಲೋಕಾರ್ಪಣೆ ಮಾಡಿದ್ದಾರೆ. ಇಂಗಳೇಶ್ವರ ಮಠದ ಹಿರಿಯ ಶ್ರೀಗಳಾದ, ಚನ್ನಬಸವ ಸ್ವಾಮೀಜಿ ಸೇರಿದಂತೆ ನಾನಾ ಮಠಾಧೀಶರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮಕ್ಕೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಬಳಿಕ ಮಾತನಾಡಿದ ಅವರು, ವಿಶ್ವಕ್ಕೆ ಸಮಾನತೆ ಸಾರಿದ, ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಣ್ಣ ಬಸವಣ್ಣನವರ ವಚನಗಳು ಈ ವಚನ […]

ಮುಂದಿನ ಐದು 5 ವರ್ಷಗಳಲ್ಲಿ ಮಲೈ ಮಹದೇಶ್ವರ ಪ್ರಮುಖ ಯಾತ್ರಾ ಸ್ಥಳವಾಗಲಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲಿ ಪ್ರಮುಖ ಯಾತ್ರಾ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದೆ. ಮೈಸೂರಿನಿಂದ ಬೆಂಗಳೂರಿನವರೆಗೆ ಪ್ರತಿಯೊಬ್ಬರೂ ನಡೆದುಕೊಳ್ಳುವ ಧಾರ್ಮಿಕ ಕ್ಷೇತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಚಿಂತನೆ ನಡೆದು ವೇಗವನ್ನೂ ಪಡೆದುಕೊಂಡಿದೆ. ಇದಕ್ಕೆ […]

ಶ್ರೀಶೈಲ ಮಲ್ಲಯ್ಯನ ಭಕ್ತಾದಿಗಳಿಗೆ ಸ್ವಾಮೀಜಿ, ಅಧಿಕಾರಿಗಳ ಸಲಹೆ, ಸೂಚನೆ

ವಿಜಯಪುರ, ಮಾ 22- ಭಕ್ತಾದಿಗಳಿಗೆ ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ನಿಷೇಧಿಸಲಾಗಿದ್ದ ಆಂಧ್ರ ಪ್ರದೇಶದ ಶ್ರೀಶೈಲದ ಮಲ್ಲಯ್ಯನ ಜಾತ್ರೆಗೆ ಈ ಬಾರಿ ಅವಕಾಶ ಕಲ್ಪಿಸಲಾಗಿದ್ದು, ಹಲವಾರು ಕಟ್ಟಳೆಗಳನ್ನು ವಿಧಿಸಲಾಗಿದೆ. ಈ ಬಾರಿ ನಡೆಯಲಿರುವ ಜಾತ್ರೆ ಮತ್ತು ಪಾಲಿಸಬೇಕಾದ ನಿಯಮಗಳ ಕುರಿತು ಶ್ರೀಶೈಲ ಜಗದ್ಗುರುಗಳು ಬಸವನಾಡು ವಿಜಯಪುರದಲ್ಲಿ ಸಭೆ ನಡೆಸಿದ್ದಾರೆ. ಆಂಧ್ರ ಪ್ರದೇಶದ ವಿಶೇಷ ಡೆಪ್ಯೂಟಿ ಕಲೆಕ್ಟರ್ ಕೂಡ ಪಾಲ್ಗೋಂಡಿದ್ದ ಈ ಸಭೆಯಲ್ಲಿ ವಿಜಯಪುರ ನಗರದ ನಾನಾ ಸಂಘಟನೆಗಳು ಮತ್ತು ಶ್ರೀಶೈಲಕ್ಕೆ ಪಾದಯಾತ್ರೆ ನಡೆಸುವ ನಾನಾ ಸಂಘಟನೆಗಳ ಮಖಂಡರೂ […]