CBSE Exam: ಶ್ರೀ ಬಿ. ಎಂ. ಪಾಟೀಲ ಸ್ಕೂಲ್ ವಿದ್ಯಾರ್ಥಿ ವಿಜಯಪುರ, ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ

ವಿಜಯಪುರ: ಇತ್ತೀಚೆಗೆ ನಡೆದ ಸಿ.ಬಿ.ಎಸ್.ಸಿ 10 ನೇ ತರಗತಿ ಪರೀಕ್ಷೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿ ಮಿಹೀರ್ ಮಹೇಶ ದೇಶಪಾಂಡೆ ಶೇ.98 ಅಂಕ ಪಡೆದು ವಿಜಯಪುರ ಮತ್ತು ಬಾಗಲಕೋಟೆ ಎರಡು ಜಿಲ್ಲೆಗಳಿಗೆ ದ್ವಿತೀಯ ಗಳಿಸಿದ್ದಾನೆ. ಅಲ್ಲದೇ, ಈ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ಪಾಸಾಗುವ ಮೂಲಕ ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಲು ಕಾರಣರಾಗಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಶಾಲೆಯ ಪ್ರಾಚಾರ್ಯ ಬಂದನಾ ಬ್ಯಾನರ್ಜಿ, ಈ ಬಾರಿ […]

StarpUp Story: ಉ. ಕ. ದ ಪ್ರಥಮ ಸ್ಟೀಲ್ ರಿಂಗ್ ಯಂತ್ರ: ಕಟ್ಟಡ ನಿರ್ಮಾಪಕರಿಗೆ ವರವಾದ ವಿನೋದ ಪೀರಗೊಂಡರ ವೈಭವಿ ಟ್ರೆಡರ್ಸ್

ಮಹೇಶ ವಿ. ಶಟಗಾರ ವಿಜಯಪುರ: ಮನೆಕಟ್ಟಿ ನೋಡು.  ಮದುವೆ ಮಾಡಿ ನೋಡು ಎಂಬುದು ನಾಣ್ಣುಡಿ.  ಆದರೆ, ಮನೆ ಕಟ್ಟುವಾಗ ಸಿಕ್ಕ ಅನುಭವವನ್ನೇ ಜೀವನದಲ್ಲಿ ಉದ್ಯಮವಾಗಿಸಿಕೊಂಡು ಯಶಸ್ವಿಯಾದರೆ ಹೇಗಿರಬೇಡ.  ಹೌದು.  ಈ ರೀತಿ ಮನೆ ಕಟ್ಟುವಾಗ ಎದುರಿಸಿದ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರ ಕಂಡುಕೊಳ್ಳಲು ರೂಪಿಸಿದ ಯೋಜನೆಗಳ ಮೇಲೆ ಯುವಕನೊಬ್ಬ ಉದ್ಯಮ ಪ್ರಾರಂಭಿಸಿ ಯಶಸ್ವಿಯಾಗಿರುವ ಸ್ಟೋರಿ ಇದು. ವಿಜಯಪುರ ನಗರದ ಸೋಲಾಪುರ ರಸ್ತೆಯಿಂದ ಶ್ರೀ ಸಿದ್ಧಾರೂಢ ಮಠದ ಕಡೆಗೆ ಹೊರಟರೆ ಸಾಕು ಮೂರ್ನಾಲ್ಕು ಅಂಗಡಿಗಳನ್ನು ದಾಟಿದರೆ ವೈಭವಿ ಟ್ರೇಡರ್ಸ್ […]

ಐದು ಚಿನ್ನದ ಪದಕ ಪಡೆದ ಶಿಕ್ಷಕಿಯ ಮಗ- ಹರಿಯಾಣದ ಯುವ ವೈದ್ಯನ ಸಾಧನೆ ಇತರರಿಗೆ ಮಾದರಿ

ವಿಜಯಪುರ: ಶಿಕ್ಷಕಿಯ ಮಗನಿಗೆ ಐದು ಚಿನ್ನದ ಪದಕ ಸೇರಿದಂತೆ ಒಟ್ಟು 349 ವಿದ್ಯಾರ್ಥಿಗಳಿಗೆ ನಾನಾ ವೈದ್ಯಕೀಯ ಪದವಿಗಳನ್ನು ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಪ್ರಧಾನ ಮಾಡಲಾಯಿತು. ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಯ ಕುಲಾಧಿಪತಿ ಡಾ. ಎಂ. ಬಿ. ಪಾಟೀಲ, ಸಚಿವ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ಮುಂತಾದವರು ಪಿ.ಎಚ್.ಡಿ, ಸ್ನಾತಕೋತ್ತರ, ಎಂ.ಬಿ.ಬಿ.ಎಸ್ ಸೇರಿದಂತೆ 349 ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ […]

ಡಾ. ರಾಘವೇಂದ್ರ ಕುಲಕರ್ಣಿ ಅವರ ಸಂಶೋಧನೆಗೆ ಭಾರತ ಸರಕಾರದಿಂದ ಪೇಟೆಂಟ್ ಘೋಷಣೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ವಿ.‌ ಕುಲಕರ್ಣಿ ಅವರು ಕೈಗೊಂಡ ಸಂಶೋಧನೆಗೆ ಭಾರತ ಸರಕಾರ ಪೇಟೆಂಟ್ ನೀಡಿದೆ. ಫಾರ್ಮಾಸ್ಯೂಟಿಕಲ್ ಕಂಪೊಸಿಷನ್ ಕಾಂಪ್ರೈಸಿಂಗ್ ಫಂಕ್ಷನಲಿ ಮಾಡಿಫೈಡ್ ಪಿಎಚ್- ರಿಸ್ಪಾನ್ಸಿವ್ ಜೆಲ್ಲೆನ್ ಗಮ್ ಗ್ರಾಫ್ಟ್ ಕೊಪಾಲಿಮರ್ ಮೈಕ್ರೊಸ್ಪೀಯರ್ಸ್ ಫಾರ್ ಕೊಲೊನ್ ಕ್ಯಾನ್ಸರ್(PHARMACEUTICAL COMPOSITION COMPRISING FUNCTIONALLY MODIFIED PH-RESPONSIVE GELLEN GRAFT COPOLYMER MICROSPHERES FOR COLON CANCER) ಆವಿಷ್ಕಾರ ಮಾಡಿದ್ದು, ಈ ಸಂಶೋಧನೆಗೆ ಭಾರತ ಸರಕಾರದ ಪೇಟೆಂಟ್ ಪ್ರಮಾಣ ಪತ್ರ […]

ಡಾ. ದೀಪಕಕುಮಾರ ಆರ್. ಚವ್ಹಾಣ ಸಂಶೋಧನೆಗೆ ಭಾರತ ಸರಕಾರದಿಂದ 2ನೇ ಬಾರಿ ಮಾನ್ಯತೆ- ಬಿ.ಎಲ್.ಡಿ.ಇ ಡೀಮ್ಡ್ ವಿವಿಗೆ ಮತ್ತೋಂದು ಗರಿ

ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸರ್ಜರಿ ವಿಭಾಗದ ಸಹಪ್ರಾಧ್ಯಾಪಕ ಮತ್ತು ಐಟಿ ವಿಭಾಗದ ಮುಖ್ಯಸ್ಥ ಡಾ. ದೀಪಕಕುಮಾರ ಆರ್. ಚವ್ಹಾಣ ಅವರ ಹೊಸ ಅನ್ವೇಷಣೆಗೆ ಭಾರತ ಸರಕಾರ ಸರ್ಟಿಫಿಕೇಟ್ ಆಪ್ ರೆಜಿಸ್ಟ್ರೇಷನ್ ಆಫ್ ಡಿಸೈನ್ ನೀಡಿದೆ.  ಈ ಮೂಲಕ ಡಾ. ದೀಪಕಕುಮಾರ ಚವ್ಹಾಣ ಎರಡನೇ ಬಾರಿಗೆ ಭಾರತ ಸರಕಾರದ ಪೇಟೆಂಟ್ ಪಡೆದ ಹೆಮ್ಮೆಗೆ ಪಾತ್ರರಾಗಿದ್ದಾರೆ. ಅವರು ಮಂಡಿಸಿದ ಕಾರ್ಡಲೆಸ್ ಮೊಬೈಲ್ ಕ್ರಿಟಿಕಲ್ ಕೇರ್ ಮಾನಿಟರಿಂಗ್ ಇಂಟರಆಕ್ಟಿವ್ ಡಿವೈಸ್(Cordless mobile critical care monitoring interactive device) ಸಂಶೋಧನೆಗೆ […]

ಜ್ಞಾನದಾಹ: 81ನೇ ಇಳಿವಯಸ್ಸಿನಲ್ಲಿ 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ ನಿಂಗಯ್ಯ ಒಡೆಯರ

ವಿಜಯಪುರ: ಮಕ್ಕಳು ಶಾಲೆಗಳನ್ನು ಅರ್ಧಕ್ಕೆ ತೊರೆಯುವುದು, ಯುವಕರು ಕಲಿಕಾಸಕ್ತಿ ಕಡಿಮೆಯಿಂದಾಗಿ ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ವರೆಗೆ ಮಾತ್ರ ಓದುವುದು ಹಾಗೂ ಪದವಿ ಕಾಲೇಜುಗಳಿಗೆ ಪ್ರವೇಶ ಪಡೆದರೂ ಪದವಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವವರೂ ಇರುವ ಇಂದಿನ ದಿನಗಳಲ್ಲಿ 81 ವರ್ಷದ ಹಿರಿಯ ನಿಂಗಯ್ಯ ಒಡೆಯರ ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.  ಕಲಿಕೆಗೆ ವಯಸ್ಸು ಎಂಬುದಿಲ್ಲ.  ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು ನಿಂಗಯ್ಯ ಒಡೆಯರ  ತೋರಿಸಿ ಕೊಟ್ಟಿದ್ದಾರೆ.   ನಗರದ ಪ್ರತಿಷ್ಠಿತ ಬಿ. […]

ವಿಟಿಯು ಪರೀಕ್ಷೆ- ವಿಜಯಪುರ ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಎಂ.ಟೆಕ್ ವಿದ್ಯಾರ್ಥಿಗಳಿಗೆ ರ್ಯಾಂಕ್

ವಿಜಯಪುರ: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 2021-22ರಲ್ಲಿ ನಡೆಸಿದ ಎಂ.ಟೆಕ್. ಪರೀಕ್ಷೆಯಲ್ಲಿ ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿವಿಗೆ ರ‌್ಯಾಂಕ್ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಎಂ.ಟೆಕ್(ಡಿಜಿಟಲ ಕಮ್ಯೂನಿಕೆಷನ್ ಮತ್ತು ನೆಟವರ್ಕಿಂಗ) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೆಷನ್ ವಿಭಾಗದದಲ್ಲಿ ಮಾಧುರಿ ಹಜೇರಿ 2ನೇ ಮತ್ತು ಮೇಘ ಚಿಪ್ಪಲಕಟ್ಟಿ 5ನೇ ರ‌್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನಗೆೆ ಬಿ.ಎಲ್.ಡಿ.ಇ. ಸಂಸ್ಥೆಯ ಆಡಳಿತ ಮಂಡಳಿ, […]

World Scientist: ಡಾ. ಆರ್. ವಿ. ಕುಲಕರ್ಣಿಯವರಿಗೆ ಸತತ 2ನೇ ಬಾರಿಗೆ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ವಿಜಯಪುರ: ಔಷಧ ವಿಜ್ಞಾನ ಹಾಗೂ ಪಾಲಿಮರ್ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ವಿಜಯಪುರದ ಬಿ.ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಅವರಿಗೆ 2022 ನೇ ಸಾಲಿನ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 2ನೇ ಬಾರಿ ಸ್ಥಾನ ಲಭಿಸಿದೆ. ಅಮೇರಿಕಾದ ಸ್ಟ್ಯಾನಫೆೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್ನ ಎಲ್ಸವಿಯರ್ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷವೂ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಅವರಲ್ಲಿ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯಲ್ಲಿ […]

Jammu Gold: ಜಮ್ಮುವಿನ ಯುವ ವೈದ್ಯನಿಗೆ ಒಲಿದು ಬಂದ ಆರು ಚಿನ್ನದ ಪದಕಗಳು- ಬಿ ಎಲ್ ಡಿ ಇ ಡೀಮ್ಡ್ ವಿವಿ ಘಟಿಕೋತ್ಸವದ ವಿಶೇಷ

ವಿಜಯಪುರ: ಆತ ಜಮ್ಮುವಿನ ಯುವಕ.  ತಂದೆ ಯೋಗೇಶ ಅರೊರಾ ಎನ್ ಜಿ ಓ ಒಂದರಲ್ಲಿ ಭದ್ರತಾ ವಿಭಾಗದ ಮುಖ್ಯ ಆಡಳಿತಾಧಿಕಾರಿ.  ತಾಯಿ ರೊಮಿಕಾ ಅರೊರಾ ಪ್ರಾಥಮಿಕ ಶಾಲೆಯ ಶಿಕ್ಷಕಿ.  ವೈದ್ಯನಾಗಬೇಕೆಂಬ ಈ ವಿದ್ಯಾರ್ಥಿಯ ಛಲ ಈಗ ಈಡೇರಿದ್ದಷ್ಟೇ, ಅಲ್ಲ, ಎಂಬಿಬಿಎಸ್ ಪದವಿಯೊಂದಿಗೆ ಆರು ಚಿನ್ನದ ಪದಕಗಳು ಈತನಿಗೆ ಬಯಸದೇ ಬಂದಿರುವುದು ವಿಶೇಷ. ಈ ಯುವ ವೈದ್ಯನ ಹೆಸರು ಗೌರವ ಅರೊರಾ.  ಬಸವ ನಾಡು ವಿಜಯಪುರದಲ್ಲಿ ನಡೆದ ಪ್ರತಿಷ್ಠಿತ ಬಿ ಎಲ್ ಡಿ ಇ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ […]

Fellowship Award: ಚರ್ಮರೋಗ ಖ್ಯಾತ ವೈದ್ಯ ಡಾ. ಅರುಣ ಇನಾಮದಾರ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಫೆಲೋಶಿಪ್ ಪ್ರದಾನ

ವಿಜಯಪುರ: ನಗರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಉಪಕುಲಪತಿ ಡಾ. ಅರುಣ ಇನಾಮದಾರ ಅವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಆವಿಷ್ಕಾರ ಮತ್ತು ಕೋಡುಗೆಗಳನ್ನು ಪರಿಗಣಿಸಿ ಪ್ರತಿ ವರ್ಷ ರಾಜ್ಯದ ನಾನಾ ಕ್ಷೇತ್ರಗಳ ಗಣ್ಯ ವಿಜ್ಞಾನಿಗಳಿಗೆ ಕೊಡ ಮಾಡುವ ಪ್ರಶಸ್ತಿ ಇದಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 2022ನೇ ವರ್ಷದ ಪ್ರಶಸ್ತಿಯ‌ನ್ನು ಚರ್ಮರೋಗ ಖ್ಯಾತ ವೈದ್ಯರೂ ಆಗಿರುವ ಡಾ. ಅರುಣ ಇನಾಮದಾರ ಅವರಿಗೆ ಪ್ರದಾನ […]