ಹೊನಲು ಬೆಳಕಿನಲ್ಲಿ ಬ್ಯಾಟ್ ಬೀಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಲ್ಲಿ ಸೇರಿದ್ದು ಕೆಲವೇ ಕೆಲವು ಜನ. ಪ್ರೇಕ್ಷಕರೂ ಇರಲಿಲ್ಲ. ಹಾಲಿ ಆಟಗಾರರೂ ಬಂದಿರಲಿಲ್ಲ. ಆದರೆ, ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾತ್ರಿ ವೇಳೆ ತೆರಳಿ ಹೊನಲು ಬೆಳಕಿನಲ್ಲಿ ಬ್ಯಾಟ್ ಬೀಸಿಯೇ ಬಿಟ್ಟರು. ಈ ಅಪರೂಪದ ಘಟನೆ ನಡೆದಿದ್ದು ರಾಜದಾನಿ ಬೆಂಗಳೂರಿನ ಕೆ ಎಸ್ ಸಿ ಎ ಚಿನ್ನಸ್ವಾಮಿ‌ ಕ್ರೀಡಾಂಗಣದಲ್ಲಿ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಗಳನ್ನು ಅಳವಡಿಸಲಾಗಿದೆ. ಈ ಫ್ಲಡ್ ಲೈಟಿಂಗ್ ಟವರ್ ಗಳನ್ನು ಮುಖ್ಯಮಂತ್ರಿಗಳು ರಾತ್ರಿ ವೇಳೆ ಲೋಕಾರ್ಪಣೆ ಮಾಡಿದರು. ಬಳಿಕ […]

ಭಾರತ ಹಾಕಿ ಮಹಿಳಾ ತಂಡದ ಕೋಚ್ ಅಂಕಿತಾ ಅವರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ

ಬೆಂಗಳೂರು: ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಅಂಕಿತಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಿದರು. ಟೋಕಿಯೋ ಓಲಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ‌ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ತಂಡ ಗೆದ್ದಿದೆ. ಈ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಿಎಂ‌ ಹೇಳಿದರು. ಅಂಕಿತ […]