ವೃಕ್ಷೊಥಾನ ಹೆರಿಟೇಜ್ ರನ್-2023: ಸ್ಮಾರಕಗಳ ಸಂರಕ್ಷಣೆ-ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಕೈ ಜೋಡಿಸಿ- ಸಚಿವ ಎಂ. ಬಿ. ಪಾಟೀಲ ಕರೆ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ಹೆರಿಟೇಜ್ ರನ್ ನಗರದಲ್ಲಿ ಯಶಸ್ವಿಯಾಗಿ ನಡೆಯಿತು.   21 ಕಿ.ಮೀ, 10 ಕಿ.ಮೀ, 5 ಕಿ.ಮೀ, 3.50 ಕಿಮೀ ಮತ್ತು 800 ಮೀಟರ್ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಮ್ಯಾರಥಾನ್‍ಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸುಮಾರು 5 ಕಿ.ಮೀ. ಓಡಿ ನೆರೆದವರನ್ನು ಹುರುದುಂಬಿಸಿದರು. ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾಕರಗಳ ರಕ್ಷಣೆ, ನೀರಿನ ಸದ್ಭಳಕೆಯೊಂದಿಗೆ ಗಿಡ-ಮರಗಳನ್ನು […]

ಬಸವ ನಾಡಿನಲ್ಲಿ ರವಿವಾರ ವೃಕ್ಷೊಥಾನ್ ಹೆರಿಟೇಜ್ ರನ್- ಓಡು ವಿಜಯಪುರ ಓಡು ಕಾರ್ಯಕ್ರಮಕ್ಕೆ ಕ್ಷಣಗಣನೆ

ವಿಜಯಪುರ: ನಗರದಲ್ಲಿ ಡಿ. 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರಾದ್ಯಂತ ಓಟಗಾರರು ಸಾಗುವ ಮರ‍್ಗಗಳಲ್ಲಿ ರವಿವಾರ ಬೆಳಿಗ್ಗೆ 6ಗಂಟೆಯಿಂದಲೆ ನಾನಾ ಸಾಂಸ್ಕೃತಿಕ ಕಲಾ ತಂಡಗಳಿಂದ ಕರ‍್ಯಕ್ರಮ ಆಯೋಜಿಸಲಾಗಿದೆ.  ಕರ್ನಾಟಕ ಅಷ್ಟೇ ಅಲ್ಲ, ನಾನಾ ರಾಜ್ಯಗಳು ಹಾಗೂ ವಿದೇಶಗಳಿಂದ ಹೆಸರು ನೋಂದಾಯಿಸಿರುವ ಕ್ರೀಡಾಪಟುಗಳು ಗುಮ್ಮಟ ನಗರಿಗೆ ಆಗಮಿಸಿದ್ದು, ಶನಿವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಹೆಸರು ನೋಂದಾಯಿಸಿದ ಓಟಗಾರರಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಬ್ ಮತ್ತು ಟಿ ರ‍್ಟ್ ಗಳನ್ನು ವಿತರಿಸಲಾಯಿತು. ಈ ಮಧ್ಯೆ ರಾಷ್ಟ್ರ […]

ಜ. 15ರೊಳಗೆ ಸೈಕ್ಲಿಂಗ್ ವೆಲೊಡ್ರಂ ಕಾಮಗಾರಿ ಪೂರ್ಣಗೊಳಿಸಿ: ಸಿಇಓ ರಾಹುಲ್ ಶಿಂಧೆ ಸೂಚನೆ

ವಿಜಯಪುರ: ವಿಜಯಪುರ ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿಯನ್ನು ಇದೇ ಜನವರಿ 15ರೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದ್ದಾರೆ. ಸೈಕ್ಲಿಂಗ್ ವೆಲೋಡ್ರಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೈಕ್ಲಿಂಗ ವೆಲೊಡ್ರೊಂ ಕಾಮಗಾರಿಯು ಆರಂಭವಾಗಿ ಬಹಳ ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಈ ಭಾಗದ ಸೈಕ್ಲಿಸ್ಟ್ ಗಳಿಗೆ ತೊಂದರೆಯಾಗುತ್ತಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಥಮಾಧ್ಯತೆಯಲ್ಲಿ ಬಾಕಿ ಉಳಿದ ಕಾಮಗಾರಿಯನ್ನು […]

ವೃಕ್ಷಾಥಾನ್ ಹೆರಿಟೇಜ್ ರನ್- 2023: ಯಾವ ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತೆ? ಪ್ರಶಸ್ತಿ ಮೊತ್ತವೇನಿದೆ? ಇಲ್ಲಿದೆ ಮಾಹಿತಿ

ವಿಜಯಪುರ: ಗುಮ್ಮಟ ನಗರಿಯಲ್ಲಿ ಡಿಸೆಂಬರ್ 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಎರಡೇ ದಿನ ಬಾಕಿ ಉಳಿದಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳು ಭರದಿಂದ ಸಾಗಿವೆ.  ಈಗಾಗಲೇ ಪ್ರಶಸ್ತಿ ಮೊತ್ತ, ಮಾರ್ಗ, ಪದಕಗಳನ್ನು ಅಂತಿಮಗೊಳಿಸಲಾಗಿದ್ದು, ಶನಿವಾರ ಬಿಬ್ ಮತ್ತು ಟಿ-ಶರ್ಟ್ ವಿತರಿಸಲಾಗುವುದು. ಈ ಬಾರಿ ಒಟ್ಟು ರೂ. 10 ಲಕ್ಷ ಬಹುಮಾನ ನಿಗದಿ ಪಡಿಸಲಾಗಿದ್ದು, ನಾಲ್ಕು ಕೆಟೆಗರಿಯಲ್ಲಿ ಒಟ್ಟು ತಲಾ 38 ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್- […]

Vrukshothon: ವೃಕ್ಷಥಾನ್ ಹೆರಿಟೇಜ್ ರನ್- 2023: ರೂ. 10 ಲಕ್ಷ ಪ್ರಾಯೋಜಕತ್ವ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಕೋಟಿವೃಕ್ಷ ಅಭಿಯಾನ(Crore Tree Planting) ಅಂಗವಾಗಿ ಡಿಸೆಂಬರ್ 24(December 24) ರವಿವಾರ(Sunday) ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2023(Vrukshoton Heritage Run-2023) ಪ್ರೊತ್ಸಾಹಿಸಲು ವಿಜಯಪುರ ನಗರ ಶಾಸಕ(Vijayapura City MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal)ರವರು ರೂ. 10 ಲಕ್ಷ ಪ್ರಾಯೋಜಕತ್ವ(Rs. 10 Lakh Sponsorship) ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸಸಿಗಳನ್ನು ನೆಟ್ಟು, ಮರಗಳನ್ನಾಗಿ ಬೆಳೆಸಿ, ಅರಣ್ಯ ಪ್ರಮಾಣ ಹೆಚ್ಚಿಸುವುದು. ವಿಜಯಪುರ ನಗರದಲ್ಲಿನ ವಿವಿಧ ಐತಿಹಾಸಿಕ ಸ್ಮಾರಕಗಳ ಕುರಿತು ಜಾಗೃತಿ ಮೂಡಿಸಿ, ಹೆಚ್ಚಿನ ಪ್ರವಾಸಿಗರನ್ನು ಆರ‍್ಷಿಸಿ, […]

ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ- ವಿಜಯಪುರ ಜಿಲ್ಲೆಗೆ ಕೀರ್ತಿತಂದ ಅಟಲ್ ಬಿರಾಹಿ ವಾಜಪೇಯಿ ಶಾಲೆಯ ವಿದ್ಯಾರ್ಥಿನಿ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಟಲ್ ಬಿಹಾರಿ ವಾಜಪೇಯಿ ಶಾಲೆಯ 6ನೆಯ ತರಗತಿ ವಿದ್ಯಾರ್ಥಿನಿ ಮುದ್ರಾ ಬಾಗಲಕೋಟ ನವದೆಹಲಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 14 ವರ್ಷದೊಳಗಿನ 22 ಕೆಜಿ ವಿಭಾಗದ ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ, ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ […]

ನಳಂದ ಕಾಲೇಜಿನ ವಿದ್ಯಾರ್ಥಿ ಜುಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಜಯಪರ:  ನಗರದ ನಳಂದಾ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜುಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ನವೆಂಬರ್ 24 ಮತ್ತು 25 ರಂದು ನಡೆಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ನಳಂದಾ ಕಾಲೇಜಿನ ಭರಮಪ್ಪ ಸಿದ್ದಲಿಂಗಪ್ಪ ದಳವಾಯಿ 66 ಕೆಜಿ ವಿಭಾಗದಲ್ಲಿ ಪ್ರಥಮ ಸ್ತಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ರಾಕೇಶ ಮಾರುತಿ ದೇವಮನೆ 55 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ […]

ವಿಜಯಪುರ ವೃಕ್ಷಥಾನ್ ಹೆರಿಟೇಜ್ ರನ್ ಗೆ ಭಾರಿ ಬೆಂಬಲ- ಸೈನಿಕ ಶಾಲೆಯ 450 ವಿದ್ಯಾರ್ಥಿಗಳು ಭಾಗಿ

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಜಾಗೃತಿಗಾಗಿ ನಗರದಲ್ಲಿ ಡಿಸೆಂಬರ್ 24 ರಂದು ಆಯೋಜಿಸಲಾಗಿರುವ ವೃಕ್ಷಥಾನ್ ಹೆರಿಟೇಜ್ ರನ್- 2023 ಗೆ ಬಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಓಟದಲ್ಲಿ ಪ್ರತಿಷ್ಠಿತ ಸೈನಿಕ ಶಾಲೆಯ 450 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಾಲ್ಗೋಳ್ಳಲಿದ್ದಾರೆ. ಮ್ಯಾರಾಥಾನ್ ಕೋರ್ ಕಮಿಟಿಯ ಸಂಚಾಲಕ ಮುರಗೇಶ ಪಟ್ಟಣಶೆಟ್ಟಿ ನೇತೃತ್ವದಲ್ಲಿ ವಿರೇಂದ್ರ ಗುಚ್ಚಟ್ಟಿ, ಡಾ. ದೀಪಕ ಚವ್ಹಾಣ ಹಾಗೂ ಡಾ. ರಾಜು ಯಲಗೊಂಡ ಸೋಮವಾರ ಸೈನಿಕ ಶಾಲೆಯ ಪ್ರಾಚರ‍್ಯೆ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಸ್ಟ್ […]

ವಿಕಲಚೇತನರ ಕಲ್ಯಾಣಕ್ಕೆ ಸದಾ ಬದ್ಧನಾಗಿದ್ದೇನೆ- ಕೀಳರಿಮೆ ಭಾವನೆ ತೊರೆದು ಸ್ವಾವಲಂಬಿಗಳಾಗಿ ಬದುಕಿ- ಎಂ. ಬಿ. ಪಾಟೀಲ

ವಿಜಯಪುರ: ವಿಶೇಷ ಚೇತನರು ತಮ್ಮಲ್ಲಿರುವ ಕೀಳರಿಮೆ ಭಾವನೆ ತೊರೆದು ಸಕಾರಾತ್ಮಕ ಯೋಚನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ […]

ತಿಕೋಟಾ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜೀವ ಗಾಂಧಿ ವಿವಿ ಕಬಡ್ಡಿ ತಂಡಕ್ಕೆ ಆಯ್ಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ತಿಕೋಟಾ ನರ್ಸಿಂಗ್ ಕಾಲೇಜಿನ ಬಿ.ಎಸ್ಸಿ ನರ್ಸಂಗ್ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಕುಮಾರ ಸಾನ್ವಿ ಮತ್ತು ಐಶ್ವರ್ಯ ಪಾರೆ ಅವರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೇ, ಇದೇ ಕಾಲೇಜಿನ ದೈಹಿಕ ನಿರ್ದೇಶಕ ಭೀಮರಾವ ದೇಸಾಯಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮತ್ತು ತರಬೇತುದಾರರು ಇನ್ನು ಮುಂದೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಕಬಡ್ಡಿಯಲ್ಲಿ ಪ್ರತಿನಿಧಿಸಲಿದ್ದಾರೆ.   ಯುನಿವರ್ಸಿಟಿ ಬ್ಲ್ಯೂ ಆಗಿ ಆಯ್ಗೆಯಾದ […]