Cricket Selection: ಬಸವ ನಾಡಿನ ಯುವತಿ ಕರ್ನಾಟಕ U-19 ಮಹಿಳಾ T-20 ಕ್ರಿಕೆಟ್ ತಂಡಕ್ಕೆ ಆಯ್ಕೆ

ವಿಜಯಪುರ : ಬಿ ಎಲ್ ಡಿ ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಬಿ. ಕಾಂ. ಮೊದಲ ವರ್ಷದ ವಿದ್ಯಾರ್ಥಿನಿ ಅನ್ನಪೂರ್ಣ ಜಿ. ಭೋಸಲೆ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ-20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 15 ಜನ ಆಟಗಾರರ ಪಟ್ಟಿಯನ್ನು ಇಂದು ಪ್ರಕಟಿಸಿದ್ದು, ಅನ್ನಪೂರ್ಣ ಜಿ. ಭೋಸಲೆ ವಿಕೆಟ್ ಕೀಪರ್ ಬ್ಯಾಟ್ಸಮನ್ ಆಗಿ ಆಯ್ಕೆಯಾಗಿದ್ದಾರೆ. ಹೈದರಾಬಾದಿನಲ್ಲಿ ಅ. 1 ರಿಂದ ಅ. […]

Cycling Help: ಯುವ ಸೈಕ್ಲಿಸ್ಟ್ ಭಾವನೆಗಳಿಗೆ ಸ್ಪಂದಿಸಿದ ಎಂ. ಬಿ. ಪಾಟೀಲ- ರೂ. 3 ಲಕ್ಷ ಆರ್ಥಿಕ ನೆರವು

ವಿಜಯಪುರ: ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಸೈಕ್ಲಿಂಗ್ ಕ್ರೀಡಾಪಟುವಿಗೆ ನೆರವಾಗುವ ಮೂಲಕ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ ಅವರು ಸಹಾಯ ಹಸ್ತ ಚಾಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದ ಭಾವನಾ ಪಾಟೀಲ ಸೈಕ್ಲಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರುತ್ತಿದ್ದು, ಸೈಕ್ಲಿಂಗ್ ಕ್ರೀಡಾ ಕೂಟಗಳಲ್ಲಿ ಸ್ವಂತ ಸೈಕಲ್ ಇಲ್ಲದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಈ ವಿಷಯ ತಿಳಿದ ಎಂ. ಬಿ. ಪಾಟೀಲ ಅವರು ಭಾವನಾ ಪಾಟೀಲ ಅವರಿಗೆ ರೂ. 3 ಲಕ್ಷ ಆರ್ಥಿಕ […]

Kho Kho Tournament: ಮಹಿಳಾ ವಿವಿಯಲ್ಲಿ 6ನೇ ಶಾಲಾಂತರ್ಗತ ಖೋ ಖೋ ಪಂದ್ಯಾವಳಿ

ವಿಜಯಪುರ: ಮೂರು ದಿನಗಳ ಶಾಲಾಂತರ್ಗತ ಖೋ ಖೋ ಮೂರು ದಿನಗಳ ಪಂದ್ಯಾವಳಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆಯಿತು. ಆರನೇಯ ಈ ಪಂದ್ಯಾವಳಿಯನ್ನು ವಿವಿಯ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಲಾಗಿತ್ತು.  ಈ ಪಂದ್ಯಾವಳಿಯನ್ನು ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವಿಷ್ಣು ಶಿಂದೆ ಮತ್ತು ಅರ್ಥಶಾಸ್ತ್ರ ವಿಭಾಗದ ಪ್ರೊ. ಆರ್. ವಿ. ಗಂಗಶೆಟ್ಟಿ ಉದ್ಧಾಟಿಸಿದರು. ಈ ಕಾರ್ಯಕ್ರಮದಲ್ಲಿ ವಿಭಾಗದ ದೈಹಿಕ ಶಿಕ್ಷಣ ಅಧ್ಯಯನ ಮುಖ್ಯಸ್ಥ ಡಾ. ರಾಜಕುಮಾರ ಮಾಲಿಪಾಟೀಲ, […]

Sprots Shivanand Patil: ಆಟದಲ್ಲಿ ಸೋಲು ಗೆಲುವಿಗಿಂತ ಪಾಲ್ಗೋಳ್ಳುವುದು ಮುಖ್ಯ- ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಆಟಗಳಲ್ಲಿ ಸೋಲು-ಗೆಲುವಿಗಿಂತ ಪಾಲ್ಗೋಳ್ಳುವಿಕೆ ಮುಖ್ಯವಾಗಿದೆ ಎಂದು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಬಜಾರ ಸರ್ಕಲ್ ನಲ್ಲಿರುವ ಶ್ರೀ ಗಜಾನನ ತರುಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಸಲಾಗಿದ್ದ ಹೊನಲು ಬೆಳಕಿನ ಆಹ್ವಾನಿತ ಮಹಿಳಾ ಮತ್ತು ಪುರುಷರ ಅಂತಾರಾಜ್ಯ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ಉದ್ಗಾಟಿಸಿ ಅವರು ಮಾತನಾಡಿದರು. ಶ್ರೀ ಗಜಾನನ ತರುಣ ಮಂಡಳಿ ಸತತ 50 ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವ ಆಚರಿಸುತ್ತಿರುವುದು ಸಂತಸದ ವಿಷಯವಾಗಿದೆ.  ಇದಕ್ಕಾಗಿ […]

Sports Meet: ಅಮೃತ ಮಹೊತ್ಸವ ಅಂಗವಾಗಿ ಬಾಗಲಕೋಟೆಯಲ್ಲಿ ಕ್ರೀಡಾಕೂಟ

ಬಾಗಲಕೋಟೆ:ಕ್ರೀಡಾ ಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಬಿವಿವಿಎಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಬಿರಾದಾರ ಹೇಳಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಾಗಲಕೋಟೆ ನಗರದ ಬಿವಿವಿಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಿಕಾಜುನ ಸಾಸನೂರು ಮಾತನಾಡಿ, ವಿದ್ಯಾಥಿ೯ಗಳು ಕ್ರೀಡೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು […]

PU Sports: ಕೆರೂರಿನಲ್ಲಿ ಚಡಚಣ ತಾಲೂಕು ಪಿಯು ಕಾಲೇಜುಗಳ ಕ್ರೀಡಾಕೂಟ- ಅಭಿನವ ದೇವಾನಂದ ಚವ್ಹಾಣ ಚಾಲನೆ

ವಿಜಯಪುರ: ಚಡಚಣ ತಾಲೂಕು ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದ ಉಧ್ಘಾಟನೆ ಕಾರ್ಯಕ್ರಮ ಕೆರೂರಿನಲ್ಲಿ ನಡೆಯಿತು. ಕೆರೂರ ಗ್ರಾಮದ ಶ್ರೀ.ಭೈರವನಾಥ ಶಿಕ್ಷಣ ಸಂಸ್ಥೆ ಆವರಣದಲ್ಲಿ ವಿಜಯಪುರ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ಭೈರವನಾಥ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಈ ಕ್ರೀಡಾಕೂಟವನ್ನು ಯುವ ನಾಯಕ ಮತ್ತು ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಅವರ ಪುತ್ರ ಅಭಿನವ ದೇವಾನಂದ ಚವ್ಹಾಣ ಉದ್ಘಾಟಿಸಿದರು. ಶ್ರೀ.ಮಾಳಿಂಗರಾಯ ಮಹಾರಾಜರು ಕಾರ್ಯಕ್ರಮದ […]

Commonwealth Bronze: ಕನ್ನಡಿಗ ಪಿ. ಗುರುರಾಜ ಗೆ ಕಾಮನವೆಲ್ತ್ ಗೇಮ್ಸ್ ನಲ್ಲಿ ಕಂಚು- ಪಿಎಂ, ಸಿಎಂ ಅಭಿನಂದನೆ

ವಿಜಯಪುರ: ಕನ್ನಡಿಗ ಗುರುರಾಜ ಬರ್ಮಿಂಗಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಎರಡನೇ ಪದಕ ಗೆಲ್ಲಿಸಿ ಕೊಟ್ಟಿದ್ದಾರೆ. 61 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಗುರುರಾಜ ಪೂಜಾರಿ ಕಂಚಿನ ಪದಕ ಜಯಿಸಿ ಪದಕಗಳ ಪಟ್ಟಿಯಲ್ಲಿ ಭಾರತಕ್ಕೆ ಎರಡನೇ ಮೆಡಲ್ ಗೆಲ್ಲಿಸಿ ಕೊಟ್ಟಿದ್ದಾರೆ. ಕನ್ನಡಿಗ ವೇಟ್ ಲಿಫ್ಟರ್ ಸ್ನ್ಯಾಚ್ ವಿಭಾದಲ್ಲಿ 118 ಕೆಜಿ ಮತ್ತು ಕ್ಲೀನ್ ಆ್ಯಂಡ್ ಜರ್ಕ್ ವಿಭಾಗದಲ್ಲಿ 151 […]

Badminton Tournament: ಉದಯಶ್ರೀ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಬ್ಯಾಡ್ಮಿಂಟನ್ ಟೂರ್ನಿ- ವಿಜೇತರಿಗೆ ಬಹುಮಾನ ವಿತರಣೆ

ವಿಜಯಪುರ: ನಗರದ ಉದಯಶ್ರೀ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಯಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳಿಗಾಗಿ ಆಹ್ವಾನಿತ ಬ್ಯಾಡ್ಮಿಂಟನ್ ಟೂರ್ನಿ ನಡೆಯಿತು. ವಿಜಯಪುರ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ದಿ. ಶ್ರೀ ಪ್ರಭುದೇವ ಗಡಶೆಟ್ಟಿ ಇವರ ಸ್ಮರಣಾರ್ಥ ಈ ಟೂರ್ನಿ ಆಯೋಜಿಸಲಾಗಿತ್ತು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 78 ಸ್ಪರ್ಧಿಗಳು ಇದರಲ್ಲಿ ಪಾಲ್ಗೊಂಡರು. ‌ ವಿಜಯಪುರ‌ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಅಧ್ಯಕ್ಷ ವೀರೇಂದ್ರ ಪಾಟೀಲ ಪಂದ್ಯಾವಳಿ ಉದ್ಘಾಟಿಸಿದರು. ಈ ಟೂರ್ನಾಮೆಂಟಿನಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ‌ ಮತ್ತು ಪ್ರಶಸ್ತಿ […]

Football Appu: ಫುಟಬಾಲ್ ಕ್ರೀಡಾಪಟುಗಳಿಗೆ ನೆರವಿಗೆ ಸದಾ ಸಿದ್ಧ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಫುಟಬಾಲ್ ಕ್ರೀಡಾಪಟುಗಳಿಗೆ ಅಗತ್ಯವಾಗಿರುವ ನೆರವಿಗೆ ಸದಾ ಸಿದ್ಧರಿರುವುದಾಗಿ ಮಾಜಿ ಸಚಿವ ಮತ್ತ ವಿಜಯಪುರ ಪುಟಬಾಲ್ ಸಂಸ್ಥೆಯ ಜಿಲ್ಲಾಧ್ಯಕ್ಷ ಅಪ್ಪು ಪಟ್ಟಣಶೆಟ್ಟಿ ತಿಳಿಸಿದ್ದಾರೆ. ಜಿಲ್ಲಾ ಪುಟಬಾಲ್ ಸಂಸ್ಥೆಯ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು. ಫುಟಬಾಲ್ ಸಂಸ್ಥೆಯಿಂದ ಫುಟಬಾಲ್ ಆಟಗಾರರಿಗೆ ಬೇಕಾಗುವ ಯಾವುದೇ ಸಹಾಯ ಸಹಕಾರಕ್ಕೆ ಸಿದ್ಧನಿದ್ದೇನೆ. ಯಾವುದೇ ಸಂದರ್ಭದಲ್ಲಿ ಸಮಸ್ಯೆಗಕನ್ನು ನನ್ನ ಗಮನಕ್ಕೆ ತಂದರೆ ಶೀಘ್ರದಲ್ಲಿ ಅವುಗಳನ್ನು ಬಗೆಹರಿಸಿ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು.   ಫುಟಬಾಲ್ ಕ್ರೀಡಾಪಟುಗಳು ಮುಂಬರುವ ದಿನಗಳಲ್ಲಿ […]

Sports Sunilgouda: ಒತ್ತಡ ನಿವಾರಣೆಗೆ ಕ್ರೀಡೆಗಳು ಉತ್ತಮ ಸಾಧನವಾಗಿವೆ- ಸುನೀಲಗೌಡ ಪಾಟೀಲ

ವಿಜಯಪುರ: ಆಧುನಿಕ ಯುಗದಲ್ಲಿ ಒತ್ತಡ ನಿವಾರಕವಾರಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯು ಒಳ್ಳೆಯ ಸಾಧನೆವಾಗಿದೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಬೆಂಗಳೂರು ಮತ್ತು ಕಲಬುರಗಿ ವಲಯ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಅವರು ಮಾತನಾಡಿದರು. ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಕ್ರೀಡೆಗೂ ಸಮಾನ ಪ್ರಾಶಸ್ತ್ಯ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಅದರಂತೆ […]