ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ.100 ಕೋ. ಅನುದಾನ ಮೀಸಲಿಡಿ- ಶಾಸಕ ಯಶವಂತರಾಯಗೌಡ ಪಾಟೀಲ ಸಿಎಂ ಗೆ ಮನವಿ

ವಿಜಯಪುರ: ಬಜೆಟ್ ನಲ್ಲಿ ಮಾಳಿ-ಮಾಲಗಾರ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ರೂ. 100 ಕೋ. ಹಣ ಮೀಸಲಿಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರವನ್ನು ಬರೆದಿರುವ ಅವರು, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಜನ ಮಾಳಿ-ಮಾಲಗಾರ ಸಮುದಾಯದವರಿದ್ದಾರೆ.  ಈ ಸಮುದಾಯ ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿದೆ.  ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಈ ಸಮಾಜ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ […]