ಸ್ವಾತಂತ್ರ್ಯ ಮಹೋತ್ಸವ ಭಿತ್ತಿಚಿತ್ರ ಸ್ಪರ್ಧೆ- ನಾನಾ ಶಾಲೆಗಳ 40 ವಿದ್ಯಾರ್ಥಿಗಳು ಭಾಗಿ

ವಿಜಯಪುರ: ಇಂಟ್ಯಾಚ್ ವಿಜಯಪುರ ಚಾಪ್ಟರ್ ಮತ್ತು ವಿಜಯಪುರ ನಗರದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಸ್ವಾತಂತ್ರ್ಯ ಮಹೋತ್ಸವ ಬಿತ್ತಿ ಚಿತ್ರ ಸ್ಪರ್ಧೆಯನ್ನು ಆಯೋಜಿಲಾಯಿತು.  ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಉಪನಿರ್ದೇಶಕ ಡಾ. ಸೋಮಶೇಖರ ವಾಲಿ ಮಾತನಾಡಿ, ಈಸ್ಟ ಇಂಡಿಯಾ ಕಂಪನಿ ಮೂಲಕ ಆಗಮಿಸಿದ್ದ ಬ್ರಿಟೀಷರು ಭಾರತಾದ್ಯಂತ ತಮ್ಮ ಪಾರುಪತ್ಯ ಸ್ಥಾಪಿಸಿ ನಮ್ಮನ್ನು ಗುಲಾಮಗಿರಿಯತ್ತ ಕೊಂಡೊಯ್ದಿದ್ದರು.  ಆದರೆ, ನಮ್ಮ ರಾಷ್ಟ್ರದ ನಾಯಕರು […]