ಉಪ್ಪಲದಿನ್ನಿ ಗ್ರಾಮದ ಜ್ವಲಂತ ಸಮಸ್ಯೆಗಳಿಗೆ ಸ್ಪಂದನೆ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆ(Vijayapura District) ಬಬಲೇಶ್ವರ(Babaleshwar)ತಾಲೂಕಿನ ಉಪ್ಪಲದಿನ್ನಿ(Uppaladinni) ಗ್ರಾಮದ ಜ್ವಲಂತ ಸಮಸ್ಯೆಗಳನ್ನು(Problems) ಪರಿಹರಿಸಲು ಪ್ರಾಮಾಣಿಕ(Honest) ಪ್ರಯತ್ನ ಮಾಡಲಾಗುವುದು. ಅದಕ್ಕೆ ಇಲ್ಲಿನ ಗ್ರಾಮಸ್ಥರ ಸಹಕಾರ(Cooperation) ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ಹೇಳಿದ್ದಾರೆ. ಉಪ್ಪಲದಿನ್ನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಪ್ಪಲದಿನ್ನಿ ಗ್ರಾಮದ ಗಂಭೀರ ಸಮಸ್ಯೆಗಳಲ್ಲೊಂದಾದ ಸ್ಮಶಾನ ಭೂಮಿ ಒತ್ತುವರಿಗೆ ಸೂಕ್ತ ಕೈಗೊಳ್ಳಲಾಗುವುದು. ನರೇಗಾ ಯೋಜನೆಯಡಿ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಅವರು […]

ಡಿಸಿ ನಡೆ ಹಳ್ಳಿಗಳ ಕಡೆ- ಈ ಬಾರಿ ಉಪ್ಪಲದಿನ್ನಿ ಗ್ರಾಮದಲ್ಲಿ ಕಾರ್ಯಕ್ರಮ- ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ

ವಿಜಯಪುರ: ಜಿಲ್ಲಾಧಿಕಾರಿಗಳ(Deputy Commissioner) ನಡೆ ಹಳ್ಳಿಗಳ ಕಡೆ(Nadige Halligala Kadege) ಕಾರ್ಯಕ್ರಮ(Programme) ಮಾ. 19 ರಂದು ವಿಜಯಪುರ(Vijayapura) ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಉಪ್ಪಲದಿನ್ನಿಯಲ್ಲಿ(Uppaladinni) ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿಜಯಪುರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಉಪ್ಪಲದಿನ್ನಿ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಸ್ಮಶಾನ ಭೂಮಿ ಸಮಸ್ಯೆ, ಪಿಂಚಣಿ, ವೈಯಕ್ತಿಕ ಮತ್ತು ಸಮುದಾಯ ಶೌಚಾಲಯ ಸಮಸ್ಯೆ, ರಸ್ತೆ ಸಮಸ್ಯೆ, ಆಶ್ರಯ ಯೋಜನೆಗಳಡಿಯ ಮನೆಗಳ ಸಮಸ್ಯೆ ಸೇರಿದಂತೆ […]

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಸಿಂದಗಿ ತಾಲೂಕಿನ ಮಲಘಾಣದಲ್ಲಿ ಕಾರ್ಯಕ್ರಮ ಆರಂಭ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ವಿಜಯಪುರ(Vijayapura District) ಜಿಲ್ಲೆಯ ಸಿಂದಗಿ(Sindagi) ತಾಲೂಕಿನ ಮಲಘಾಣ(Malaghan) ಗ್ರಾಮದಲ್ಲಿ(Village) ಆರಂಭವಾಗಿದೆ. ಮಲಘಾಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಆರಂಭವಾದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಸ್ವೀಕರಿಸಿದ ಅರ್ಜಿಗಳು ಮತ್ತು ಕೈಗೊಂಡ ಕ್ರಮಗಳ ಕುರಿತು ಇಂಡಿ ಉಪವಿಭಾಗ ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ದೇಶ ಕುರಿತು ಮಾಹಿತಿ ನೀಡಿದರು. ಜಿ. ಪಂ. ಮುಖ್ಯ ಕಾರ್ಯ ನಿರ್ವಣಾಧಿಕಾರಿ ರಾಹುಲ ಶಿಂಧೆ ಮಾತನಾಡಿ, […]