Earthquake Damage: ಭೂಕಂಪನ ಎಫೆಕ್ಟ್- ಬತ್ತಿದ ಭಾವಿ, ತಿಕೋಟಾ, ಇಂಡಿ ತಾಲೂಕುಗಳಲ್ಲಿ 48 ಮನೆಗಳಿಗೆ ಹಾನಿ

ವಿಜಯಪುರ: ಬೆಳಿಗ್ಗೆ ಸಂಭವಿಸಿದ ಭೂಕಂಪನ ದಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ಮತ್ತು ಇಂಡಿ ತಾಲೂಕುಗಳಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ತಿಕೋಟಾ ತಾಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾಗಳಲ್ಲಿ ಭೂಕಂಪನದಿಂದ ಹಾನಿಯಾಗಿದೆ.  ಹಿರಿಯ ಭೂ ವಿಜ್ಞಾನಿ, ತಿಕೋಟಾ ಕಂದಾಯ ನಿರೀಕ್ಷಕರು ಮತ್ತು ಅರಕೇರಿ ಗ್ರಾಮ ಲೆಕ್ಕಾಧಿಕಾರಿ ಅವರು ತಹಸೀಲ್ದಾರ ಅವರ ಸಮ್ಮುಖದಲ್ಲಿ ಜಂಟಿಯಾಗಿ ಹಾನಿಯಾದ ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು […]