Ganga Kalyan: ಗಂಗಾ ಕಲ್ಯಾಣ-ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡಿ- ಕೋಟಾ ಶ್ರೀನಿವಾಸ ಪೂಜಾರಿ

ವಿಜಯಪುರ: ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಡಿ. ದೇವರಾಜ್ ಅರಸು ಅಭಿವೃದ್ದಿ ನಿಗಮ ವತಿಯಿಂದ ಗಂಗಾ ಕಲ್ಯಾಣ ಹಾಗೂ ನಾನಾ ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಅವರು ತಿಕೋಟಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಆಯ್ಕೆ […]