ಉಪ್ಪಲದಿನ್ನಿ ಗ್ರಾಮದ ಜ್ವಲಂತ ಸಮಸ್ಯೆಗಳಿಗೆ ಸ್ಪಂದನೆ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆ(Vijayapura District) ಬಬಲೇಶ್ವರ(Babaleshwar)ತಾಲೂಕಿನ ಉಪ್ಪಲದಿನ್ನಿ(Uppaladinni) ಗ್ರಾಮದ ಜ್ವಲಂತ ಸಮಸ್ಯೆಗಳನ್ನು(Problems) ಪರಿಹರಿಸಲು ಪ್ರಾಮಾಣಿಕ(Honest) ಪ್ರಯತ್ನ ಮಾಡಲಾಗುವುದು. ಅದಕ್ಕೆ ಇಲ್ಲಿನ ಗ್ರಾಮಸ್ಥರ ಸಹಕಾರ(Cooperation) ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ಹೇಳಿದ್ದಾರೆ. ಉಪ್ಪಲದಿನ್ನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಪ್ಪಲದಿನ್ನಿ ಗ್ರಾಮದ ಗಂಭೀರ ಸಮಸ್ಯೆಗಳಲ್ಲೊಂದಾದ ಸ್ಮಶಾನ ಭೂಮಿ ಒತ್ತುವರಿಗೆ ಸೂಕ್ತ ಕೈಗೊಳ್ಳಲಾಗುವುದು. ನರೇಗಾ ಯೋಜನೆಯಡಿ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಅವರು […]