ಉಕ್ರೇನಿನನಿಂದ ವಿಜಯಪುರ ಜಿಲ್ಲೆಯ 10 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್, 6 ಜನ ಇನ್ನೂ ಬರಬೇಕಿದೆ- ಡಿಸಿ ಪಿ ಸುನಿಲಕುಮಾರ

ವಿಜಯಪುರ: ಯುದ್ಧಪೀಡಿತ ಯುಕ್ರೇನಿನಲ್ಲಿ ಸಿಲುಕಿದ್ದ ವಿಜಯಪುರ ಜಿಲ್ಲೆಯ ಒಟ್ಟು 16 ವಿದ್ಯಾರ್ಥಿಗಳಲ್ಲಿ 10 ಜನರು ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ ಸುನಿಲಕುಮಾರ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಇಬ್ಬರು ವಿದ್ಯಾರ್ಥಿಗಳು ಬುಡಾಪೆಸ್ಟ್ ವಿಮಾನ ನಿಲ್ದಾಣದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ನಾಲ್ಕು ಜನ ವಿದ್ಯಾರ್ಥಿಗಳು ಉಕ್ರೇನಿನಿಂದ ರೊಮೇನಿಯಾ ಗಡಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕೆಲವೇ ಗಂಟೆಗಳಲ್ಲಿ ರೊಮೇನಿಯ ತಲುಪಲಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸುನಿಲಕುಮಾರ ತಿಳಿಸಿದ್ದಾರೆ.