Earthquake DC: ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ: ಭಯಭೀತರಾಗದಂತೆ ಸಾರ್ವಜನಿಕರಲ್ಲಿ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮನವಿ

ವಿಜಯಪುರ: ಜಿಲ್ಲೆಯ ಕನ್ನೂರ ಸೇರಿದಂತೆ ನಾನಾ ಕಡೆ ಬೆಳಿಗ್ಗೆ ಸಂಭವಿಸಿದ 4.4 ತೀವ್ರತೆಯ ಲಘು ಭೂಕಂಪನ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರು ಭಯಪಡಬಾರದು ಎಂದು ಜಿಲ್ಲಾಧಿಕಾರಿ  ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ. ಭೂಕಂಪನದ ವಿಷಯ ತಿಳಿಯುತ್ತಿದ್ದಂತೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರ ಬೆಂಗಳೂರಿನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಭೂಕಂಪನ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪ್ರದೇಶದ ಗಡಿ ಪ್ರದೇಶದ ವಿವಿಧೆಡೆ ಈ ಲಘು ಭೂಕಂಪನ ಸಂಭವಿಸಿದೆ. ಜುಲೈ 9ರಂದು ಬೆಳಗಿನ 6.22ರ ಸುಮಾರಿನ […]