ಧರ್ಮದ ಕುರಿತು ಸಂಘ ಪರಿವಾರ, ಬಿಜೆಪಿಯವರು ನೀಡುವ ಪ್ರಚೋದನೆಗೆ ಒಳಗಾಗಬಾರದು ಎಂದು ಅಲ್ಪಸಂಖ್ಯಾತರಿಗೆ ಕರೆ ನೀಡಿದ ಎಸ್. ಎಂ‌. ಪಾಟೀಲ ಗಣಿಹಾರ

ವಿಜಯಪುರ: ಧರ್ಮದ ವಿಚಾರದಲ್ಲಿ(Religion Issue) ಸಂಘ ಪರಿವಾರ(Sangha Pariwar) ಮತ್ತು ಬಿಜೆಪಿಯವರು ನೀಡುವ ಪ್ರಚೋದನೆಗೆ(Provocation) ಒಳಗಾಗಬಾರದು ಎಂದು ಕೆಪಿಸಿಸಿ ವಕ್ತಾರ ಮತ್ತು ಅಲ್ಪಸಂಖ್ಯಾತರ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ(S M Patil Ganihar) ಮುಸ್ಲಿನರಿಗೆ ಮನವಿ ಮಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯ ಮುಗಿಯುವವರೆಗೆ ಸಂಘ ಪರಿವಾರ ಮತ್ತು ಬಿಜೆಪಿ ಮುಸ್ಲಿಮರನ್ನು ಪ್ರಚೋದಿಸಲಿವೆ. ಈ ಹಿನ್ನೆಲೆಯಲ್ಲಿ ಯಾರೂ ಪ್ರಚೋದನೆಗೆ ಒಳಗಾಗಬಾರದು. ಸಂವಿಧಾನದ ಮೇಲೆ ವಿಶ್ವಾಸವಿಟ್ಟು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. […]