MLC Bhumipuje: ತಿಕೋಟಾ, ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ನೀರು ಸರಬರಾಜು ಯೋಜನೆಗೆ ಸುನೀಲಗೌಡ ಪಾಟೀಲ ಭೂಮಿ ಪೂಜೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಅವರು ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ಜೆ.ಜೆ.ಎಂ. ಯೋಜನೆಯಡಿ ಮನೆ– ಮನೆಗೆ ನಳದ ಮೂಲಕ ನೀರು ಸರಬರಾಜು ಮಾಡುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ತಿಕೋಟಾ ತಾಲೂಕಿನ ಅತಾಲಟ್ಟಿ ಎಲ್.ಟಿ. ರೂ. 67.75ಲಕ್ಷ ವೆಚ್ಚದಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ನಾನು ರಾಠೋಡ, […]