ಬಬಲೇಶ್ವರ ತಾಲೂಕಿನ ಬಣಜಿಗ ಸಮಾಜದ ಪದಾಧಿಕಾರಿಗಳ ಪೂರ್ವಭಾವಿ ಸಭೆ

ವಿಜಯಪುರ: ಬಬಲೇಶ್ವರ ತಾಲೂಕಗಿನ ಬಣಜಿಗ ಸಮಾಜದ ಪದಾಧಿಕಾರಿಗಳ ಪೂರ್ವಭಾವಿ ಸಭೆ ವಿಜಯಪುರ ನಗರದ ಸ್ಟೇಶನ ರಸ್ತೆಯಲ್ಲಿರುವ ಶ್ರೀ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ನಡೆಯಿತು.  ಈ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ನಾಡಿನಲ್ಲಿ ಸರಳತೆ, ಸೌಮ್ಯ, ಶಿಸ್ತಿನಿಂದ ದಿನನಿತ್ಯ ಸ್ವಪ್ರಯತ್ನದೊಂದಿಗೆ ಉದ್ಯೋಗ ಜೊತೆಜೊತೆಯಾಗಿ ಸಾಮಾಜಿಕ ಕಾರ್ಯಗಳನ್ನು ಮಾಡುವುದರ ಮೂಲಕ ಬಣಜಿಗ ಸಮಾಜದ ಜನತೆ ಎಲ್ಲ ಸಮುದಾಯದವರೊಂದಿಗೆ ಪ್ರೀತಿ ವಿಶ್ವಾಸದಿಂದ ಇದ್ದಾರೆ ಎಂದು ಹೇಳಿದರು. ಶತಮಾನಗಳ ಹಿಂದೆ ನಮ್ಮ ಪೂರ್ವಜರ ತಪಸ್ಸಿನ ಫಲದಿಂದ ಶ್ರೀ ಯಡಿಯೂರ ಸಿದ್ದಲಿಂಗೇಶ್ವರ, […]